ವಿ.ಕೆ.ಶಶಿಕಲಾ 
ದೇಶ

ಶಶಿಕಲಾಗೆ ಜೈಲಿನಲ್ಲಿ ವಿಐಪಿ ಸೌಲಭ್ಯ: ತನಿಖೆಗೆ ಡಿಎಂಕೆ ಆಗ್ರಹ

ಅಣ್ಣಾ ಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ....

ಚೆನ್ನೈ: ಅಣ್ಣಾ ಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ ನೀಡುತ್ತಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆ ನಡೆಸಬೇಕೆಂದು ದ್ರಾವಿಡ ಮುನ್ನೇತ್ರ ಕಳಗಂ ಒತ್ತಾಯಿಸಿದೆ.
ಭ್ರಷ್ಟಾಚಾರ, ಅಕ್ರಮ ಆಸ್ತಿ ಹಿನ್ನೆಲೆಯಲ್ಲಿ ಶಶಿಕಲಾ ಪ್ರಸ್ತುತ ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯಾಗಿದ್ದಾರೆ.
ಕಾರಾಗೃಹ ವಿಭಾಗದ ಉಪ ಇನ್ಸ್ಪೆಕ್ಟರ್ ಜನರಲ್(ಡಿಐಜಿ) ರೂಪಾ ಅವರು ಸಲ್ಲಿಸಿದ ವರದಿ ಆಘಾತವನ್ನುಂಟುಮಾಡಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಈ ಪ್ರಕರಣ ಕುರಿತು ಸಮಗ್ರ ತನಿಖೆಯ ಅಗತ್ಯವಿದೆ. ಆ ಬಳಿಕ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಡಿಎಂಕೆ ವಕ್ತಾರ ಶರವಣನ್ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.
ವಿರೋಧ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂತಹ ಪ್ರಕರಣ ನಡೆಯುತ್ತಿರುವುದು ಇದು ಮೊದಲ ಸಲವೇನಲ್ಲ. ಹಣದಿಂದ ಏನು ಬೇಕಾದರೂ ಮಾಡಬಹುದೆಂದು ಎಐಎಡಿಎಂಕೆ ಪಕ್ಷದವರು ನಂಬಿದ್ದಾರೆ ಎಂದರು.
ಶಶಿಕಲಾ ಅವರು ಈ ಹಿಂದೆ ಕೂಡ ಆರೋಗ್ಯವಿಲ್ಲವೆಂದು ಹೇಳಿ ಜೈಲಿನಲ್ಲಿರುವುದನ್ನು ತಪ್ಪಿಸಿಕೊಂಡಿದ್ದರು. ಈ ವಿಷಯ ಆಶ್ಚರ್ಯವನ್ನುಂಟುಮಾಡುತ್ತಿಲ್ಲ.ಹಣದಿಂದ ಜೈಲಿನಲ್ಲಿರುವುದನ್ನು ತಪ್ಪಿಸಬಹುದು ಎಂಬುದು ಎಐಎಡಿಎಂಕೆಯವರ ಮನೋಧರ್ಮವಾಗಿದೆ. ಇಂತಹ ವರ್ತನೆ ನಿಜಕ್ಕೂ ಆತಂಕಕಾರಿ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT