ವಿ.ಕೆ.ಶಶಿಕಲಾ 
ದೇಶ

ಶಶಿಕಲಾಗೆ ಜೈಲಿನಲ್ಲಿ ವಿಐಪಿ ಸೌಲಭ್ಯ: ತನಿಖೆಗೆ ಡಿಎಂಕೆ ಆಗ್ರಹ

ಅಣ್ಣಾ ಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ....

ಚೆನ್ನೈ: ಅಣ್ಣಾ ಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ ನೀಡುತ್ತಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆ ನಡೆಸಬೇಕೆಂದು ದ್ರಾವಿಡ ಮುನ್ನೇತ್ರ ಕಳಗಂ ಒತ್ತಾಯಿಸಿದೆ.
ಭ್ರಷ್ಟಾಚಾರ, ಅಕ್ರಮ ಆಸ್ತಿ ಹಿನ್ನೆಲೆಯಲ್ಲಿ ಶಶಿಕಲಾ ಪ್ರಸ್ತುತ ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯಾಗಿದ್ದಾರೆ.
ಕಾರಾಗೃಹ ವಿಭಾಗದ ಉಪ ಇನ್ಸ್ಪೆಕ್ಟರ್ ಜನರಲ್(ಡಿಐಜಿ) ರೂಪಾ ಅವರು ಸಲ್ಲಿಸಿದ ವರದಿ ಆಘಾತವನ್ನುಂಟುಮಾಡಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಈ ಪ್ರಕರಣ ಕುರಿತು ಸಮಗ್ರ ತನಿಖೆಯ ಅಗತ್ಯವಿದೆ. ಆ ಬಳಿಕ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಡಿಎಂಕೆ ವಕ್ತಾರ ಶರವಣನ್ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.
ವಿರೋಧ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂತಹ ಪ್ರಕರಣ ನಡೆಯುತ್ತಿರುವುದು ಇದು ಮೊದಲ ಸಲವೇನಲ್ಲ. ಹಣದಿಂದ ಏನು ಬೇಕಾದರೂ ಮಾಡಬಹುದೆಂದು ಎಐಎಡಿಎಂಕೆ ಪಕ್ಷದವರು ನಂಬಿದ್ದಾರೆ ಎಂದರು.
ಶಶಿಕಲಾ ಅವರು ಈ ಹಿಂದೆ ಕೂಡ ಆರೋಗ್ಯವಿಲ್ಲವೆಂದು ಹೇಳಿ ಜೈಲಿನಲ್ಲಿರುವುದನ್ನು ತಪ್ಪಿಸಿಕೊಂಡಿದ್ದರು. ಈ ವಿಷಯ ಆಶ್ಚರ್ಯವನ್ನುಂಟುಮಾಡುತ್ತಿಲ್ಲ.ಹಣದಿಂದ ಜೈಲಿನಲ್ಲಿರುವುದನ್ನು ತಪ್ಪಿಸಬಹುದು ಎಂಬುದು ಎಐಎಡಿಎಂಕೆಯವರ ಮನೋಧರ್ಮವಾಗಿದೆ. ಇಂತಹ ವರ್ತನೆ ನಿಜಕ್ಕೂ ಆತಂಕಕಾರಿ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT