ರಾಷ್ಟ್ರಪತಿ ಚುನಾವಣೆ 
ದೇಶ

ರಾಷ್ಟ್ರಪತಿ ಚುನಾವಣೆ: ಜನಪ್ರತಿನಿಧಿಗಳು ತಮ್ಮ ಪೆನ್ ಕೂಡ ಬಳಸುವಂತಿಲ್ಲ!

ಜು.17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಸದರು, ಶಾಸಕರು ಸ್ವಂತ ಪೆನ್ ಬಳಕೆ ಮಾಡುವಂತಿಲ್ಲ, ಬದಲಾಗಿ ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ವಿಶೇಷವಾಗಿ ಅಭಿವೃದ್ಧಿಪಡಿಸಲಾಗಿರುವ

ನವದೆಹಲಿ: ಜು.17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಸದರು, ಶಾಸಕರು ಸ್ವಂತ ಪೆನ್ ಬಳಕೆ ಮಾಡುವಂತಿಲ್ಲ, ಬದಲಾಗಿ ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ವಿಶೇಷವಾಗಿ ಅಭಿವೃದ್ಧಿಪಡಿಸಲಾಗಿರುವ ಸಾಧನದಿಂದ ಗುರುತಿಸಬೇಕಾಗುತ್ತದೆ. 
ಒಂದು ವೇಳೆ ಯಾವುದೇ ಶಾಸಕ/ ಸಂಸದ ಸ್ವಂತ ಪೆನ್ ನಿಂದಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಅಂತಹವರ ಮತದಾನ ಅಸಿಂಧುವಾಗಲಿದೆ ಎಂದು ಚುನಾವಣಾ ಆಯೋಗ ಜು.16 ರಂದು ಸ್ಪಷ್ಟಪಡಿಸಿದೆ. ಮೈಸೂರು ಪೇಂಟ್ಸ್ ನಿಂದ ಅಭಿವೃದ್ಧಿಪಡಿಸಲಾದ ನೇರಳೆ ಬಣ್ಣದ ಇಂಕ್(ಶಾಯಿ) ಹೊಂದಿರುವ ಸಾಧನದಿಂದಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ. 
ಕಳೆದ ವರ್ಷ ಹರ್ಯಾಣದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಿದ್ದ ಜನಪ್ರತಿನಿಧಿಗಳು ತಾವು ಬಳಸುವ ಪೆನ್ ನಿಂದ ಅಭ್ಯರ್ಥಿಗಳನ್ನು ಗುರುತಿಸಿದ್ದರು. ವಿಶೇಷ ಸಾಧನದ ಹೊರತಾಗಿಯೂ ತಮ್ಮ ಪೆನ್ ನಿಂದಲೇ ಶಾಸಕರು ಅಭ್ಯರ್ಥಿಗಳನ್ನು ಗುರುತಿಸಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ 12 ಶಾಸಕರ ಮತಗಳನ್ನು ಅಸಿಂಧುಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎಚ್ಚೆತ್ತುಕೊಂಡಿರುವ ಆಯೋಗ ಶಾಸಕರು ಸ್ವಂತ ಪೆನ್ ಬಳಕೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT