ಸಂಗ್ರಹ ಚಿತ್ರ 
ದೇಶ

ಚೆನ್ನೈ ಬೇಕರಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವ ವೇಳೆ ಸಿಲಿಂಡರ್ ಸ್ಫೋಟ- ಓರ್ವ ಅಗ್ನಿಶಾಮಕ ಸಿಬ್ಬಂದಿ ಸಾವು

ಚೆನ್ನೈನ ಬೇಕರಿಯೊಂದರ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಮರಣವನ್ನಪ್ಪಿ 47ಕ್ಕೂ ಹೆಚ್ಚು ಜನರಿಗೆ...

ಚೆನ್ನೈ: ಚೆನ್ನೈನ ಬೇಕರಿಯೊಂದರ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಮರಣವನ್ನಪ್ಪಿ 47ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ. 
ಕೊಡುಂಗೈಯೂರ್ ಮೀನಾಂಬಲ್ ಸ್ಟ್ರೀಟ್ ನಲ್ಲಿರುವ ಬೇಕರಿಯೊಂದರಲ್ಲಿ ಇಂದು ಬೆಳಿಗಿನ ಜಾವ 1 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದರು. 
ಈ ವೇಳೆ ಬೇಕರಿಯಲ್ಲಿದ್ದ ಸಿಲಿಂಡರ್ ವೊಂದು ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿದ್ದ ಓರ್ವ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಗ್ನಿ ಅವಘಡದಲ್ಲಿ ಬೇಕರಿಯ ಹತ್ತಿರದಲ್ಲಿಯೇ ವಾಸವಿದ್ದ 47 ಮಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ 47 ಮಂದಿಯ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಮೃತ ಅಗ್ನಿಶಾಮಕ ದಳದ ಸಿಬ್ಬಂದಿಗೆ ಪರಿಹಾರ ಘೋಷಿಸಿದ ಸಿಎಂ 
ಬೆಂಕಿ ನಂದಿಸುವ ವೇಳೆ ಮೃತಪಟ್ಟ ಅಗ್ನಿಶಾಮಕದ ದಳದ ಸಿಬ್ಬಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಧನ ಹಾಗೂ ಕುಟುಂಬ ಸದಸ್ಯರಿಗೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿಯವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಗಾಯಾಳುಗಳಿಗೂ ಪರಿಹಾರ ನೀಡುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?