ಸಂಗ್ರಹ ಚಿತ್ರ 
ದೇಶ

ಮಸೀದಿ ಧ್ವಂಸ ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: ಹಲವೆಡೆ ಬಂದ್'ಗೆ ಕರೆ

ಧಾರ್ಮಿಕ ಸಂಘಟನೆಗಳು ಸ್ಥಳೀಯ ಜಮ್ಮಾ ಮಸೀದಿಯೊಂದನ್ನು ಧ್ವಂಸ ಮಾಡಿದ್ದಾರೆಂದು ಆರೋಪಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಘರ್ಷಣೆ ಏರ್ಪಟ್ಟಿದ್ದು, ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಟೌನ್ ನಲ್ಲಿ ಭಾನುವಾರ ಬಂದ್ ಆಚರಣೆ ಆಚರಿಸಲಾಗುತ್ತಿದೆ ಎಂದು ತಿಳಿದುಬಂದಿದೆ...

ಶ್ರೀನಗರ: ಧಾರ್ಮಿಕ ಸಂಘಟನೆಗಳು ಸ್ಥಳೀಯ ಜಮ್ಮಾ ಮಸೀದಿಯೊಂದನ್ನು ಧ್ವಂಸ ಮಾಡಿದ್ದಾರೆಂದು ಆರೋಪಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಘರ್ಷಣೆ ಏರ್ಪಟ್ಟಿದ್ದು, ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಟೌನ್ ನಲ್ಲಿ ಭಾನುವಾರ ಬಂದ್ ಆಚರಣೆ ಆಚರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. 
ಮಸೀದಿಯನ್ನು ಧ್ವಂಸ ಮಾಡಿದ್ದಾರೆಂದು ಸುದ್ದಿ ಹರಡುತ್ತಿದ್ದಂತೆಯೇ ದಕ್ಷಿಣ ಕಾಶ್ಮೀರದ ಹಲವೆಡೆ ಕಲ್ಲು ತೂರಾಟ ಆರಂಭವಾಗಿತ್ತು. ಭದ್ರತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಇದೀಗ ಮಸೀದಿಯ ಸಮಿತಿ ಸದಸ್ಯರು ದಕ್ಷಿಣ ಕಾಶ್ಮೀರದಲ್ಲಿ ಬಂದ್ ಗೆ ಕರೆ ನೀಡಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿರುವುದಾಗಿ ವರದಿಗಳು ತಿಳಿಸಿವೆ. 
ಮಾಸೀದಿ ಸಮಿತಿಯ ಮುಖ್ಯಸ್ಥ ಕ್ವಾಜಿ ಯಾಸಿರ್ ಅಹ್ಮದ್ ಮಾತನಾಡಿದ್ದು, ಮಸೀದಿ ಧ್ವಂಸಗೊಂಡ ಬಳಿಕ ಸ್ಥಳಕ್ಕೆ ಬಂದಿದ್ದ ಭದ್ರತಾ ಸಿಬ್ಬಂದಿಗಳು ಘರ್ಷಣೆ ವೇಳೆ 14 ಜನರನ್ನು ಬಂಧಿಸಿದ್ದಾರೆಂದು ಆರೋಪಿಸಿದ್ದಾರೆ. 
ಯಾಸಿರ್ ಅಹ್ಮದ್ ಅವರ ಈ ಆರೋಪವನ್ನು ತಳ್ಳಿ ಹಾಕಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಘರ್ಷಣೆ ವೇಳೆ ಯುವಕರನ್ನು ಬಂಧನಕ್ಕೊಳಪಡಿಸಲಾಗಿತ್ತು. ಆದರೆ, ಸಂಜೆ ವೇಳೆಗೆ ಯುವಕರನ್ನು ಬಿಡುಗಡೆಗೊಳಿಸಲಾಗಿತ್ತು ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ತ್ರಾಲ್ ನ ಸತೋರಾ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಿದ್ದ ಸೇನಾಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿತ್ತು. ಎನ್ ಕೌಂಟರ್ ನಲ್ಲಿ ಹತ್ಯೆಯಾದ ಮೂವರ ಪೈಕಿ ಓರ್ವ ಉಗ್ರನನ್ನು ಸಾಜಿದ್ ಅಹ್ಮದ್ ಗಿಲ್ಕರ್ ಎಂದು ಗುರ್ತಿಸಲಾಗಿದೆ. ಉಗ್ರ ಸಾಜಿದ್ ಹತ್ಯೆ ಹಿನ್ನಲೆಯಲ್ಲಿ ಶ್ರೀನಗರದ ಹಲವೆಡೆ ಬಂದ್ ಆಚರಿಸುತ್ತಿರುವುದಾಗಿ ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT