ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (ಸಂಗ್ರಹ ಚಿತ್ರ) 
ದೇಶ

ತೇಜಸ್ವಿ ಆಯ್ಕೆಯಾಗಿದ್ದು ಜನರಿಂದಲೇ ಹೊರತು ನಿಮ್ಮಿಂದಲ್ಲ: ನಿತೀಶ್'ಗೆ ಲಾಲು

ತೇಜಸ್ವಿ ಯಾದವ್ ಅವರನ್ನು ಜನರು ಆಯ್ಕೆ ಮಾಡಿದ್ದಾರೆಯೇ ಹೊರತು ರಾಜಿನಾಮೆ ಕೇಳುತ್ತಿರುವವರಲ್ಲ. ತೇಜಸ್ವಿ ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ಕೊಡುವುದಿಲ್ಲ ಎಂದು ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ...

ಪಾಟ್ನ: ತೇಜಸ್ವಿ ಯಾದವ್ ಅವರನ್ನು ಜನರು ಆಯ್ಕೆ ಮಾಡಿದ್ದಾರೆಯೇ ಹೊರತು ರಾಜಿನಾಮೆ ಕೇಳುತ್ತಿರುವವರಲ್ಲ. ತೇಜಸ್ವಿ ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ಕೊಡುವುದಿಲ್ಲ ಎಂದು ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ. 
ಆರ್'ಜೆಡಿ ಮುಖ್ಯಸ್ಥ ಲಾಲೂ ಪುತ್ರರೂ ಆಗಿರುವ ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು. ಈ ಆರೋಪ ಬಿಹಾರ ರಾಜ್ಯ ರಾಜಕೀಯದಲ್ಲಿ ತಲ್ಲಣವನ್ನು ಮೂಡಿಸಿದ್ದು, ಮಹಾಮೈತ್ರಿ ಪಕ್ಷಗಳ ಮಧ್ಯೆ ಉಂಟಾಗಿರುವ ಬಿರುಕು ಬಿಹಾರ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಪರಿಸ್ಥಿತಿ ಎದುರಾಗುವಂತೆ ಮಾಡಿದೆ. 
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜೆಡಿಯು ಪಕ್ಷದ ನಾಯಕರು ತೇಜಸ್ವಿಯವರ ರಾಜಿನಾಮೆಗೆ ಆಗ್ರಹಿಸುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರು, ತೇಜಸ್ವಿ ಯಾದವ್ ಅವರು ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ನೀಡಬಾರದುಎಂದು ಪಕ್ಷದ ವಿಧಾನಮಂಡಳ ನಿರ್ಧಾರ ತೆಗೆದುಕೊಂಡಿದೆ. ಕೇವಲ ಎಫ್ಐಆರ್ ದಾಖಲಾಗಿದೆ ಎಂಬ ಕಾರಣಕ್ಕೆ ರಾಜಿನಾಮೆಯನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT