ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆ 
ದೇಶ

ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ, ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸೂಚನೆ!

ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ.. ಕೂಡಲೇ ಇಂತಹ ಪ್ರಕರಣಗಳ ವಿರುದ್ಧ...

ನವದೆಹಲಿ: ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ.. ಕೂಡಲೇ ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಭಾನುವಾರ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಪ್ರಧಾನಿ ಮೋದಿ ಇಂತಹುದೊಂದು ಸೂಚನೆ ನೀಡಿದ್ದು, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳು ಸ್ವತಂತ್ರ್ಯ ಎಂಬ ಸಂದೇಶ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಗೋರಕ್ಷಣೆ ಹೆಸರಲ್ಲಿ ಹಿಂಸಾಚಾರಕ್ಕಿಳಿಯುವುದನ್ನು  ಕೇಂದ್ರ ಸರ್ಕಾರ ಸಹಿಸುವುದಿಲ್ಲ. ಹಿಂಸಾಚಾರಿಗಳ ವಿರುದ್ಧ ಸೂಕ್ತ ಕ್ರಮ ಹಾಗೂ ತನಿಖೆ ನಡೆಸುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಗೋರಕ್ಷಣೆ ಹಿಂಸಾಚಾರಕ್ಕೆ ರಾಜಕೀಯ ಬಣ್ಣ ಅಥವಾ ಕೋಮು ಬಣ್ಣ ಬಳಿಯದಂತೆ ರಾಜಕೀಯ ಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದು, ಇಂತಹ ಕೃತ್ಯಗಳಿಂದ ದೇಶಕ್ಕಾಗುವ ಲಾಭವೇನೂ ಇಲ್ಲ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಈಶಾನ್ಯ ಭಾರತದಲ್ಲಿ ಸಂಭವಿಸುತ್ತಿರುವ ಪ್ರವಾಹದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಅಧಿಕಾರಿಗಳಿಂಗ ವರದಿ ತರಿಸಿಕೊಂಡು ರಾಜ್ಯಗಳಿಗೆ ಬೇಕಾದ ಸೂಕ್ತ ನೆರವು ನೀಡುವಲ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಂಗಾರು ಅಧಿವೇಶ ಆರಂಭವಾಗುವ ಹಿನ್ನಲೆಯಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲು ಪ್ರಧಾನಿ ಮೋದಿ ಈ ಸರ್ವ ಪಕ್ಷ ಸಭೆಯನ್ನು ಕರೆದಿದ್ದರು. ಇಂದಿನ ಸಭೆಯಲ್ಲಿ ಜೆಡಿಯು, ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರು ಗೈರಾಗಿದ್ದರು. ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!