ಅಪಘಾತದಲ್ಲಿ ಕಂದಕಕ್ಕೆ ಬಿದ್ದಿದ್ದ ಯಾತ್ರಾರ್ಥಿಗಳನ್ನು ರಕ್ಷಣೆ ಮಾಡುತ್ತಿರುವ ಭದ್ರತಾ ಸಿಬ್ಬಂದಿಗಳು 
ದೇಶ

ಅಮರನಾಥ ಯಾತ್ರಿಕರ ಬಸ್ ಅಪಘಾತ ಪ್ರಕರಣ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ, ಸಿಎಂ ನಿತೀಶ್

ಅಮರನಾಥ ಯಾತ್ರಾರ್ಥಿಗಳ ಬಸ್ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುರ್ಘಟನೆಯಲ್ಲಿ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ...

ಜಮ್ಮು: ಅಮರನಾಥ ಯಾತ್ರಾರ್ಥಿಗಳ ಬಸ್ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುರ್ಘಟನೆಯಲ್ಲಿ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಹಾರ ರಾಜ್ಯ ಮುಖ್ಯಮಂತ್ರಿ  ಪರಿಹಾರ ಘೋಷಣೆ ಮಾಡಿದ್ದಾರೆ. 
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ರೂ.2 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ. 
ಅಪಘಾತದಕ್ಕೀಡಾದ ಬಸ್ ನಲ್ಲಿ ಬಹುತೇಕರು ರಾಜಸ್ತಾನ ಹಾಗೂ ಬಿಹಾರ ರಾಜ್ಯದ ಮೂಲದವರೇ ಆಗಿದ್ದು, ಇದರಂತೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೂ ಕೂಡ ಅಪಘಾತದಲ್ಲಿ ಮೃತಪಟ್ಟಿರುವ ತಮ್ಮ ರಾಜ್ಯದ ಜನರಿಗೆ ರೂ.4 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 
ಅಮರನಾಥ ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಮತ್ತೊಂದು ದುರಂತ ಇದಾಗಿದೆ. ಅಮರನಾಥ ಯಾತ್ರಿಕರನ್ನು ಸಾಗಿಸುತ್ತಿದ್ದ ಬಸ್'ವೊಂದು ನಿನ್ನೆ ನಾಚ್ಲಾನಾ ಕಣಿವೆ ಮಾರ್ಗದಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾಗಿತ್ತು. ಈ ವೇಳೆ ಬಸ್ ಕದಕಕ್ಕೆ ಉರುಳಿಬಿದ್ದಿ ಪರಿಣಾಮ 17 ಮಂದಿ ಯಾತ್ರಿಕರು ಸಾವನ್ನಪ್ಪಿ. 35ಕ್ಕೂ ಹೆಚ್ಚು ಮಂದಿಗೆ ಗಾಯವಾಗಿಗೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT