ಮಧುರ್ ಭಂಡಾರ್ಕರ್ 
ದೇಶ

ಮಹಾ ಸರ್ಕಾರದಿಂದ ಮಧುರ್ ಭಂಡಾರ್ಕರ್ ಗೆ ಭದ್ರತೆ

ಖ್ಯಾತ ಬಾಲಿವುಡ್ ನಿರ್ದೇಶಕ ಮಧುರ್ ಭಂಡಾರ್ಕರ್ ಅವರಿಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಸೋಮವಾರ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಮುಂಬೈ: ಖ್ಯಾತ ಬಾಲಿವುಡ್ ನಿರ್ದೇಶಕ ಮಧುರ್ ಭಂಡಾರ್ಕರ್ ಅವರಿಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಸೋಮವಾರ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ಮಧುರ್ ಭಂಡಾರ್ಕರ್ ಅವರ ಹೊಸ ಚಿತ್ರ 'ಇಂದು ಸರ್ಕಾರ್'ಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಿನಿಮಾದ ಪ್ರಚಾರ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕರಿಗೆ ಭದ್ರತೆ ನೀಡುವುದಾಗಿ ಮಹಾ ಸರ್ಕಾರ ತಿಳಿಸಿದೆ.
'ಇಂದು ಸರ್ಕಾರ್' ಚಿತ್ರದ ಬಗ್ಗೆ ಇಂದು ನಾಗ್ಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಗೆ ಮಧುರ್ ಭಂಡಾರ್ಕರ್ ಆಗಮಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದರಿಂದ ಪತ್ರಿಕಾಗೋಷ್ಠಿ ರದ್ದಾಗಿದ್ದು, ನಿರ್ದೇಶಕರಿಗೆ ಸೂಕ್ತ ಭದ್ರತೆ ನೀಡಲಾಗಿದೆ. 
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವಧಿಯಲ್ಲಿ ಜಾರಿಯಾಗಿದ್ದ ತುರ್ತು ಪರಿಸ್ಥಿತಿಯ ಕುರಿತಾಗಿ ಹಾಗೂ ಇಂದಿರಾಗಾಂಧಿ ಆಡಳಿತದ ಕುರಿತಾಗಿ ಇಂದು ಸರ್ಕಾರ್ ಚಿತ್ರ ನಿರ್ಮಿಸಲಾಗಿದ್ದು, ಇಂದಿರಾಗಾಂಧಿ, ಸಂಜಯ್ ಗಾಂಧಿ ಪ್ರೇರಿತ ಪಾತ್ರಗಳು ಇವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT