ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ನಮ್ಮ ಬೆಂಬಲ ಕೋವಿಂದ್'ಗಲ್ಲ, ಮೀರಾ ಕುಮಾರ್'ಗೆ: ಎನ್'ಸಿಪಿ ಸ್ಪಷ್ಟನೆ

ಆಡಳಿತಾರೂಢ ಕೇಂದ್ರದ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂಬ ವರದಿಗಳನ್ನು ಎನ್'ಸಿಪಿ ಸೋಮವಾರ ತಳ್ಳಿಹಾಕಿದೆ...

ನವದೆಹಲಿ: ಆಡಳಿತಾರೂಢ ಕೇಂದ್ರದ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂಬ ವರದಿಗಳನ್ನು ಎನ್'ಸಿಪಿ ಸೋಮವಾರ ತಳ್ಳಿಹಾಕಿದೆ. 
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಅವರು, ನಮ್ಮ ಪಕ್ಷ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿರುವ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡಿದೆ. ಕೋವಿಂದ್ ಅವರಿಗೆ ಯಾವುದೇ ಸಂಸದರಾಗಲೀ, ಶಾಸಕರಾಗಲೀ ಮತ ಹಾಕಿಲ್ಲ. ಮೀರಾ ಕುಮಾರ್ ಅವರಿಗೆ ಪಕ್ಷ ಬೆಂಬಲ ನೀಡುತ್ತಿದೆ ಎಂದು ಈ ಹಿಂದೆಯೇ ಎನ್ ಸಿಪಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಘೋಷಣೆ ಮಾಡಿದ್ದರು ಎಂದು ಹೇಳಿದ್ದಾರೆ. 
ಎನ್ ಸಿಪಿ ಕೋವಿಂದ್ ಅವರಿಗೆ ಬೆಂಬಲ ನೀಡುತ್ತಿದೆ ಎಂಬ ವರದಿಗಳು ಆಧಾರರಹಿತವಾದದ್ದು. ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೇ ಈ ಹಿಂದೆಯೇ ನಮ್ಮ ಬೆಂಬಲ ಮೀರಾ ಕುಮಾರ್ ಅವರಿಗೆ ಎಂದು ಘೋಷಿಸಿದ್ದರು. ಇದೀಗ ಎಲ್ಲಾ ಸಂಸದರು ಹಾಗೂ ಶಾಸಕರು ಮೀರಾ ಅವರಿಗೆ ಮತ ಹಾಕುತ್ತಿದ್ದಾರೆಂದು ತಿಳಿಸಿದ್ದಾರೆ. 
ದೇಶದ ಅತ್ಯುನ್ನತ ಸ್ಥಾನ ಇದಾಗಿದ್ದು, ಸಂವಿಧಾನವನ್ನು ರಕ್ಷಣೆ ಮಾಡುವುದು ರಾಷ್ಟ್ರಪತಿಗಳ ಜವಾಬ್ದಾರಿಯಾಗಿರುತ್ತದೆ. ಆ ಸ್ಥಾನ ಘನತೆಯನ್ನು ಕಾಪಾಡುವವರು ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವವರು ಗೆಲವು ಸಾಧಿಸುತ್ತಾರೆಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT