ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ನಮ್ಮ ಬೆಂಬಲ ಕೋವಿಂದ್'ಗಲ್ಲ, ಮೀರಾ ಕುಮಾರ್'ಗೆ: ಎನ್'ಸಿಪಿ ಸ್ಪಷ್ಟನೆ

ಆಡಳಿತಾರೂಢ ಕೇಂದ್ರದ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂಬ ವರದಿಗಳನ್ನು ಎನ್'ಸಿಪಿ ಸೋಮವಾರ ತಳ್ಳಿಹಾಕಿದೆ...

ನವದೆಹಲಿ: ಆಡಳಿತಾರೂಢ ಕೇಂದ್ರದ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂಬ ವರದಿಗಳನ್ನು ಎನ್'ಸಿಪಿ ಸೋಮವಾರ ತಳ್ಳಿಹಾಕಿದೆ. 
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಅವರು, ನಮ್ಮ ಪಕ್ಷ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿರುವ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡಿದೆ. ಕೋವಿಂದ್ ಅವರಿಗೆ ಯಾವುದೇ ಸಂಸದರಾಗಲೀ, ಶಾಸಕರಾಗಲೀ ಮತ ಹಾಕಿಲ್ಲ. ಮೀರಾ ಕುಮಾರ್ ಅವರಿಗೆ ಪಕ್ಷ ಬೆಂಬಲ ನೀಡುತ್ತಿದೆ ಎಂದು ಈ ಹಿಂದೆಯೇ ಎನ್ ಸಿಪಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಘೋಷಣೆ ಮಾಡಿದ್ದರು ಎಂದು ಹೇಳಿದ್ದಾರೆ. 
ಎನ್ ಸಿಪಿ ಕೋವಿಂದ್ ಅವರಿಗೆ ಬೆಂಬಲ ನೀಡುತ್ತಿದೆ ಎಂಬ ವರದಿಗಳು ಆಧಾರರಹಿತವಾದದ್ದು. ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೇ ಈ ಹಿಂದೆಯೇ ನಮ್ಮ ಬೆಂಬಲ ಮೀರಾ ಕುಮಾರ್ ಅವರಿಗೆ ಎಂದು ಘೋಷಿಸಿದ್ದರು. ಇದೀಗ ಎಲ್ಲಾ ಸಂಸದರು ಹಾಗೂ ಶಾಸಕರು ಮೀರಾ ಅವರಿಗೆ ಮತ ಹಾಕುತ್ತಿದ್ದಾರೆಂದು ತಿಳಿಸಿದ್ದಾರೆ. 
ದೇಶದ ಅತ್ಯುನ್ನತ ಸ್ಥಾನ ಇದಾಗಿದ್ದು, ಸಂವಿಧಾನವನ್ನು ರಕ್ಷಣೆ ಮಾಡುವುದು ರಾಷ್ಟ್ರಪತಿಗಳ ಜವಾಬ್ದಾರಿಯಾಗಿರುತ್ತದೆ. ಆ ಸ್ಥಾನ ಘನತೆಯನ್ನು ಕಾಪಾಡುವವರು ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವವರು ಗೆಲವು ಸಾಧಿಸುತ್ತಾರೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?