ಸಂಗ್ರಹ ಚಿತ್ರ 
ದೇಶ

ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಮತದಾನ ಆರಂಭ

ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ದೆಹಲಿಯಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ನವದೆಹಲಿ: ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ದೆಹಲಿಯಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಹಾಗೂ ಎನ್ ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಅವರ ನಡುವೆ ಜಿದ್ದಾ ಜಿದ್ದಿನ ಪೈಪೋಟಿ ನಿರೀಕ್ಷಿಸಲಾಗತ್ತಿದ್ದು, ಜುಲೈ 20ರಂದು ಫಲಿತಾಂಶ ಪ್ರಕಟವಾಗಲಿದೆ.

71 ವರ್ಷದ ರಾಮನಾಥ ಕೋವಿಂದ ಉತ್ತಮ ನಾಯಕರೆಂಬ ವರ್ಚಸ್ಸು ಹೊಂದಿದ್ದಾರೆ. ಕಾನೂನು ಮತ್ತು ಸಂವಿಧಾನದಲ್ಲಿ ಪಾಂಡಿತ್ಯ ಹೊಂದಿರುವ ಕೋವಿಂದ್, ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಎರಡು ಬಾರಿ  ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡಿದ್ದ ಇವರು, ಈ ಹಿಂದೆ ಬಿಹಾರದ ರಾಜ್ಯಪಾಲರಾಗಿದ್ದರು. ಇನ್ನು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರ ವಿಚಾರಕ್ಕೆ ಬರುವುದಾದರೆ ಬಿಹಾರದಲ್ಲಿ ಜನಿಸಿದ ಮೀರಾ ಕುಮಾರ್ (72) ಸರಳ  ಹಾಗೂ ಸೌಜನ್ಯದ ವ್ಯಕ್ತಿತ್ವ ಹೊಂದಿದ್ದಾರೆ. ಉತ್ತಮ ನಾಯಕಿಯಾಗಿ ವರ್ಚಸ್ಸು ಪಡೆದಿದ್ದಾರೆ. ಲೋಕಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಮೀರಾ ಕುಮಾರ್ ಅವರು ಇಂಡಿಯನ್ ಫಾರಿನ್ ಸರ್ವಿಸ್​ನಲ್ಲಿ  ಸೇವೆ ಸಲ್ಲಿಸಿದ್ದರಿಂದ ವಿದೇಶ ನೀತಿಗಳ ಬಗ್ಗೆ ಅರಿವು ಹೊಂದಿದ್ದಾರೆ.

ದಲಿತ ನಾಯಕಿಯಾಗಿಯೂ ಮೀರಾ ಕುಮಾರ್ ಅವರು ಗುರುತಿಸಿಕೊಂಡಿದ್ದು, ಉಪಪ್ರಧಾನಿಯಾಗಿದ್ದ ಜಗಜೀವನರಾಮ್ ಅವರ ಮಗಳು ಎಂಬುದು ಮತ್ತೊಂದು ಹಿರಿಮೆ. ರಾಮವಿಲಾಸ್ ಪಾಸ್ವಾನ್ ಮತ್ತು ಮಾಯಾವತಿಯಂಥ  ದಿಗ್ಗಜ ನಾಯಕರಿಗೆ ಮೀರಾ ಕುಮಾರ್ ಅವರು ಚುನಾವಣೆಯಲ್ಲಿ ಸೋಲಿನ ರುಚಿ ಉಣಿಸಿದ್ದಾರೆ. ಕರೋಲ್​ಬಾಗ್ ಕ್ಷೇತ್ರದಿಂದ 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ವಿಧಾನಸೌಧದಲ್ಲೂ ಮತದಾನ ಪ್ರಕ್ರಿಯೆ ಆರಂಭ
ಇತ್ತ ಕರ್ನಾಟಕದಲ್ಲೂ ರಾಷ್ಟ್ರಪತಿ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮೂಲಗಳ ಪ್ರಕಾರ ಈಗಾಗಲೇ ಶಾಸಕರಾದ  ಸಿಟಿರವಿ, ಆನಂದ್ ಸಿಂಗ್ ಸೇರಿದಂತೆ ಹಲವು ಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮತದಾನ ಪ್ರಕ್ರಿಯೆ ಸಂಜೆ 5 ಗಂಟೆಯವರೆಗೂ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?