ಕಮಲ್ ಹಾಸನ್ 
ದೇಶ

ತಾಕತ್ತಿದ್ದರೇ ಕಮಲ್ ಹಾಸನ್ ರಾಜಕೀಯ ಸೇರಲಿ: ತಮಿಳುನಾಡು ಸಚಿವ ಸವಾಲು

ನಟ ಕಮಲ್ ಹಾಸನ್ ಗೆ ತಾಕತ್ತಿದ್ದರೇ ರಾಜಕೀಯಕ್ಕೆ ಬರಲಿ ಎಂದು ತಮಿಳುನಾಡು ಹಣಕಾಸು ಸಚಿವ ಡಿ. ಜಯಕುಮಾರ್...

ಚೆನ್ನೈ: ನಟ ಕಮಲ್ ಹಾಸನ್ ಗೆ ತಾಕತ್ತಿದ್ದರೇ ರಾಜಕೀಯಕ್ಕೆ ಬರಲಿ ಎಂದು ತಮಿಳುನಾಡು ಹಣಕಾಸು ಸಚಿವ ಡಿ. ಜಯಕುಮಾರ್ ಸವಾಲು ಹಾಕಿದ್ದಾರೆ. 
ತಮಿಳುನಾಡು ಸರ್ಕಾರದದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ನಟ ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವ ಜಯಕುಮಾರ್, ಕಮಲ್ ಹಾಸನ್ ಅವರು ಬಿಗ್ ಬಾಸ್ ರಿಯಾಲಿಟಿ  ಶೋ ಟಾರ್ಗೆಟ್ ಮಾಡಿ ಮಾತನಾಡಿದ್ದಾರೆ, ತಮಿಳು ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ, ಜೊತೆಗೆ ಅದರಲ್ಲಿ ಭಾಗವಹಿಸುವ ಸ್ಪರ್ಧಿಗಳ ಬಗ್ಗೆಯು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಜಯಲಲಿತಾ ಅವರು ಬದುಕಿದ್ದಾಗ ಕಮಲ್ ಹಾಸನ್ ಏಕೆ ಮೌನವಾಗಿದ್ದರು ಎಂದು ನನಗೆ ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ. 
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸುವ ಸ್ವಾತಂತ್ರ್ಯವಿದೆ ಎಂದು ಮಾಜಿ ಸಿಎಂ ಓ ಪನ್ನೀರ್ ಸೆಲ್ವಂ,  ಕಮಲ್ ಹಾಸನ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ನಟನೊಬ್ಬನಿಗೆ ಬೆದರಿಕೆ ಹಾಕುವ ಮುನ್ನ ಅವರ ಹೇಳಿಕೆಗಳ ಬಗ್ಗೆ  ಸಚಿವರು ಸೂಕ್ತ ಸಾಕ್ಷಿ ಪುರಾವೆ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ಕಮಲ್ ಹಾಸನ್ ಹೇಳಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾನೂನು ಸಚಿವ ಸಿ.ವಿ ಷಣ್ಮುಗಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT