ಕಮಲ್ ಹಾಸನ್ 
ದೇಶ

ತಾಕತ್ತಿದ್ದರೇ ಕಮಲ್ ಹಾಸನ್ ರಾಜಕೀಯ ಸೇರಲಿ: ತಮಿಳುನಾಡು ಸಚಿವ ಸವಾಲು

ನಟ ಕಮಲ್ ಹಾಸನ್ ಗೆ ತಾಕತ್ತಿದ್ದರೇ ರಾಜಕೀಯಕ್ಕೆ ಬರಲಿ ಎಂದು ತಮಿಳುನಾಡು ಹಣಕಾಸು ಸಚಿವ ಡಿ. ಜಯಕುಮಾರ್...

ಚೆನ್ನೈ: ನಟ ಕಮಲ್ ಹಾಸನ್ ಗೆ ತಾಕತ್ತಿದ್ದರೇ ರಾಜಕೀಯಕ್ಕೆ ಬರಲಿ ಎಂದು ತಮಿಳುನಾಡು ಹಣಕಾಸು ಸಚಿವ ಡಿ. ಜಯಕುಮಾರ್ ಸವಾಲು ಹಾಕಿದ್ದಾರೆ. 
ತಮಿಳುನಾಡು ಸರ್ಕಾರದದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ನಟ ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವ ಜಯಕುಮಾರ್, ಕಮಲ್ ಹಾಸನ್ ಅವರು ಬಿಗ್ ಬಾಸ್ ರಿಯಾಲಿಟಿ  ಶೋ ಟಾರ್ಗೆಟ್ ಮಾಡಿ ಮಾತನಾಡಿದ್ದಾರೆ, ತಮಿಳು ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ, ಜೊತೆಗೆ ಅದರಲ್ಲಿ ಭಾಗವಹಿಸುವ ಸ್ಪರ್ಧಿಗಳ ಬಗ್ಗೆಯು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಜಯಲಲಿತಾ ಅವರು ಬದುಕಿದ್ದಾಗ ಕಮಲ್ ಹಾಸನ್ ಏಕೆ ಮೌನವಾಗಿದ್ದರು ಎಂದು ನನಗೆ ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ. 
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸುವ ಸ್ವಾತಂತ್ರ್ಯವಿದೆ ಎಂದು ಮಾಜಿ ಸಿಎಂ ಓ ಪನ್ನೀರ್ ಸೆಲ್ವಂ,  ಕಮಲ್ ಹಾಸನ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ನಟನೊಬ್ಬನಿಗೆ ಬೆದರಿಕೆ ಹಾಕುವ ಮುನ್ನ ಅವರ ಹೇಳಿಕೆಗಳ ಬಗ್ಗೆ  ಸಚಿವರು ಸೂಕ್ತ ಸಾಕ್ಷಿ ಪುರಾವೆ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ಕಮಲ್ ಹಾಸನ್ ಹೇಳಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾನೂನು ಸಚಿವ ಸಿ.ವಿ ಷಣ್ಮುಗಂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT