ಪುರಿ ಜಗನ್ನಾಥ್ 
ದೇಶ

ಹೈದರಾಬಾದ್ ಡ್ರಗ್ ಮಾಫಿಯಾ: ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ನಿರ್ದೇಶಕ ಪುರಿ ಜಗನ್ನಾಥ್

ಅಕ್ರಮ ಡ್ರಗ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಅಪ್ಪು, ಯುವರಾಜ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿರುವ....

ಹೈದರಾಬಾದ್‌: ಅಕ್ರಮ ಡ್ರಗ್ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಅಪ್ಪು, ಯುವರಾಜ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತ ತೆಲುಗು ನಿರ್ದೇಶಕ ಪುರಿ ಜಗನ್ನಾಥ್ ಅವರು ತೆಲಂಗಾಣ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಮುಂದೆ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.
ಅಕ್ರಮ ಡ್ರಗ್‌ ವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಕಳೆದ ವಾರ ಪುರಿ ಜಗನ್ನಾಥ್‌ ಸೇರಿದಂತೆ ಚಿತ್ರರಂಗದ ಹಲವು ನಟ–ನಟಿ, ನಿರ್ಮಾಪಕರು ಹಾಗೂ ನಿರ್ದೇಶಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.
ಪೊಕಿರಿ ಚಿತ್ರದ ಖ್ಯಾತಿಯ ನಿರ್ದೇಶಕ ಪುರಿ ಜಗನ್ನಾಥ್ ಅವರು ಇಂದು ಬೆಳಗ್ಗೆ 10ಗಂಟೆ ಅಬಕಾರಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಟಾಲಿವುಡ್ ನ ಇನ್ನು 11 ಆರೋಪಿಗಳು ವಿಚಾರಣೆ ಎದುರಿಸಬೇಕಾಗಿದೆ.
ಡ್ರಗ್‌ ಮಾಫಿಯಾಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ವ್ಯಕ್ತಿಯ ಸಂಪರ್ಕದಲ್ಲಿದ್ದ ಚಿತ್ರರಂಗದ 12 ಗಣ್ಯರಿಗೆ ನೋಟಿಸ್‌ ನೀಡಲಾಗಿದೆ. 
ನಟಿ ಚಾರ್ಮಿ ಕೌರ್‌ ಹಾಗೂ ಮುಮೈತ್‌ ಖಾನ್‌ ಅವರಿಗೆ ಇದೇ 20, 21ರಂದು ಎಸ್‌ಐಟಿ ಮುಂದೆ ಹಾಜರಾಗಲು ಸೂಚಿಸಲಾಗಿದೆ. ಬಂಧಿಸಲಾಗಿರುವ ಮಾದಕ ವಸ್ತು ಮಾರಾಟಗಾರರೊಂದಿಗೆ ಸಂಪರ್ಕ ಇರುವ ಚಿತ್ರರಂಗದ ಬಹಳಷ್ಟು ಕಲಾವಿದರನ್ನು ಪ್ರಶ್ನಿಸಲಾಗುತ್ತಿದೆ.
ನಟ ರವಿತೇಜ, ನವ್‌ದೀಪ್‌, ತರುಣ್‌, ಸುಬ್ಬರಾಜು, ನಂದು, ಛಾಯಾಗ್ರಾಹಕ ಶ್ಯಾಮ್‌ ಕೆ ನಾಯ್ಡು ಹಾಗೂ ನಿರ್ದೇಶಕ ಚಿನ್ನ ಅವರನ್ನೂ ಎಸ್‌ಐಟಿ ಪ್ರಶ್ನಿಸಲು ನೋಟಿಸ್‌ ನೀಡಿದೆ.
ಅಕ್ರಮವಾಗಿ ಡ್ರಗ್ ಅನ್ನು ಶಾಲಾ–ಕಾಲೇಜುಗಳಿಗೆ ಸರಬರಾಜು ಮಾಡಲಾಗಿದ್ದು, ನಗರದ ಖಾಸಗಿ ಶಾಲಾ–ಕಾಲೇಜುಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡ್ರಗ್‌ ವ್ಯಸನಿಗಳಾಗಿರುವುದನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.
ನಾಸಾದಲ್ಲಿ ಕಾರ್ಯನಿರ್ವಹಿಸಿದ್ದ ಏರೋಸ್ಪೇಸ್‌ ಎಂಜಿನಿಯರ್‌ , ಏಳು ಜನ ಬಿ.ಟೆಕ್‌ ಪದವೀಧರರು ಹಾಗೂ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 13 ಜನ ಆರೋಪಿಗಳನ್ನು ಡ್ರಗ್‌ ವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT