ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಭಾರತದ ಪ್ರಗತಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನೆ ಮುಖ್ಯ: ಪ್ರಧಾನಿ ಮೋದಿ

ಭಾರತ ದೇಶದ ಪ್ರಗತಿ ಮತ್ತು ಸಮೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನೆಗಳು....

ನವದೆಹಲಿ: ಭಾರತ ದೇಶದ ಪ್ರಗತಿ ಮತ್ತು ಸಮೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನೆಗಳು ಪ್ರಮುಖವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಅವರು ಇಂದು ದೆಹಲಿಯಲ್ಲಿ ಉನ್ನತ ಮಟ್ಟದ ವಿಜ್ಞಾನಿಗಳೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ, ದೇಶದ ಸಮಸ್ಯೆಗಳನ್ನು ಬಗೆಹರಿಸಲು ವಿಜ್ಞಾನವನ್ನು ಅಳವಡಿಸಿಕೊಳ್ಳುವುದು ವಿಜ್ಞಾನ ಮತ್ತು ತಂತ್ರಜ್ಞಾನ ವಲಯಗಳಲ್ಲಿ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.
ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭೆಗಳ ಹುಡುಕುವಿಕೆಯ ಬಗ್ಗೆ ಉದಾಹರಣೆ ನೀಡಿದ ಸಂದರ್ಭದಲ್ಲಿ ಅವರು, ಶಾಲಾ ವಿದ್ಯಾರ್ಥಿಗಳಲ್ಲಿ ಪ್ರತಿಭಾನ್ವಿತ ಮತ್ತು ವಿಜ್ಞಾನದಲ್ಲಿ ಉತ್ತಮ ಪ್ರತಿಭೆಗಳನ್ನು ಗುರುತಿಸಲು ಯಾಂತ್ರಿಕ ವ್ಯವಸ್ಥೆಯನ್ನು ತರಬೇಕು ಎಂದು ಹೇಳಿದರು.
ತಳಮಟ್ಟದಲ್ಲಿ ತುಂಬಾ ಸಂಶೋಧನೆಗಳು ನಡೆಯುತ್ತಿರುತ್ತದೆ.ಯಶಸ್ವಿ ಆವಿಷ್ಕಾರಗಳನ್ನು ದಾಖಲಿಸಿ ತಳಮಟ್ಟದಲ್ಲಿ ಪುನರಾವರ್ತಿಸಲು ಯಾಂತ್ರಿಕ ವ್ಯವಸ್ಥೆಯನ್ನು ರಚಿಸಬೇಕು ಎಂದು ಪ್ರಧಾನಿ ಹೇಳಿದರು. ಈ ವಿಷಯದಲ್ಲಿ ರಕ್ಷಣಾ ಸಿಬ್ಬಂದಿ ಸಂಶೋಧನೆಗಳನ್ನು ನಡೆಸುತ್ತಾರೆ ಎಂದರು.
ಕೃಷಿ ವಲಯದಲ್ಲಿ, ಉತ್ತಮ ಪ್ರೊಟೀನ್ ಇರುವ ಧಾನ್ಯಗಳು, ಬಲವರ್ಧಿತ ಆಹಾರಗಳು, ಹರಳೆಣ್ಣೆಯಲ್ಲಿ ಮೌಲ್ಯ ಸೇರ್ಪಡೆ ಇತ್ಯಾದಿ ಹೊಸ ವಿಷಯಗಳನ್ನು ಮಾಹಿತಿ, ತಂತ್ರಜ್ಞಾನಗಳ ಮೂಲಕ ಹೆಚ್ಚಿಸಬೇಕು. ಇಂಧನ ವಲಯದಲ್ಲಿ ಸೌರ ವಿದ್ಯುತ್ ನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಂಡು ವಿದ್ಯುತ್ ಇಂಧನದ ಆಮದಿನ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದರು.
ದೇಶದ ಸಾಮಾನ್ಯ ಜನಜೀವನ ಮಟ್ಟವನ್ನು ಸುಧಾರಿಸಲು ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಸವಾಲುಗಳನ್ನು ಎದುರಿಸುವಲ್ಲಿ ಭಾರತೀಯ ವಿಜ್ಞಾನಿಗಳು ಸಮರ್ಥರಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ, 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 2022ರ ಹೊತ್ತಿಗೆ, ಗುರಿಯನ್ನು ತಲುಪಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.
ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಸಾರಸ್ವತ್, ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಡಾ.ಆರ್.ಚಿದಂಬರಂ ಮತ್ತು ವಿಜ್ಞಾನ ಇಲಾಖೆಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT