ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ 
ದೇಶ

2016ರಲ್ಲಿ 11,400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಸಚಿವ ರಾಧಾ ಮೋಹನ್ ಸಿಂಗ್

ಕಳೆದ ವರ್ಷ 2016ರಲ್ಲಿ ದೇಶದಲ್ಲಿ 11,400 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

ನವದೆಹಲಿ:  ಕಳೆದ ವರ್ಷ, 2016ರಲ್ಲಿ ದೇಶದಲ್ಲಿ 11,400 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ತಿಳಿಸಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗದ ಅಂಕಿಅಂಶ ಪ್ರಕಾರ,  2016ರಲ್ಲಿ 11,400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2015ರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 12,602 ಆಗಿತ್ತು ಎಂದು ನಿನ್ನೆ ಅವರು ಲೋಕಸಭೆಯಲ್ಲಿ ಕೃಷಿ ಸಮಸ್ಯೆ ಬಗೆಗಿನ ಚರ್ಚೆ ವೇಳೆ ಉತ್ತರಿಸಿದರು. ಈ ಅಂಕಿಅಂಶ ಇನ್ನೂ ಪ್ರಕಟವಾಗಿಲ್ಲ.
ರೈತರ ಆದಾಯವನ್ನು ಹೆಚ್ಚಿಸುವ ಮೂಲಕ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಕೃಷಿ ವಲಯಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರ ಸಮಸ್ಯೆಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದು ಇದಕ್ಕೂ ಮುನ್ನ ಕಾಂಗ್ರೆಸ್ ಸದಸ್ಯ ಜ್ಯೋತಿರಾದಿತ್ಯ ಸಿಂದಿಯಾ ಸರ್ಕಾರವನ್ನು ಟೀಕಿಸಿದರು.
ಕೃಷಿ ಉತ್ಪಾದನೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡುವುದಾಗಿ ಭಾರತೀಯ ಜನತಾ ಪಾರ್ಟಿ ಭರವಸೆ ನೀಡಿತ್ತು. 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರೈತರ ಬಂಡವಾಳ ಮೊತ್ತಕ್ಕಿಂತ 1.5 ಪಟ್ಟು ಹೆಚ್ಚು ಬೆಲೆಯನ್ನು ಉತ್ಪಾದನೆ ಬೆಳೆಗೆ ನೀಡುವುದಾಗಿ  ಬಿಜೆಪಿ ಹೇಳಿತ್ತು ಎಂದು ಸಚಿವರು ತಿಳಿಸಿದರು. ಬೆಳೆ ವಿಮೆ ಯೋಜನೆಯಡಿ 3,560 ಕೋಟಿ ರೂಪಾಯಿಗಳನ್ನು ನೀಡಲಾಗಿದ್ದು, ರೈತರ ವಿಮೆ ಮೊತ್ತವಾಗಿ 3,548 ಕೋಟಿ ರೂಪಾಯಿ ನೀಡಲಾಗಿದೆ ಎಂದು ಹೇಳಿದರು. ಅದೇ ರೀತಿ, 2015-16ರಲ್ಲಿ ಒಟ್ಟು ಪ್ರೀಮಿಯಂ ಮೊತ್ತ 3, 760 ಕೋಟಿ ರೂಪಾಯಿಗಳಾಗಿದ್ದು, ವಿಮೆ ಮೊತ್ತವಾಗಿ 4 ,7 10 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಚಿವ ರಾಧಾ ಮೋಹನ್ ಸಿಂಗ್ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT