ನರೇಶ್ ಅಗರ್ ವಾಲ್ 
ದೇಶ

ಹಿಂದೂ ದೇವತೆಗಳನ್ನು ಆಲ್ಕೋಹಾಲ್ ಬ್ರಾಂಡ್ ಗೆ ಹೋಲಿಸಿದ ಸಂಸದ: ಸಂಸತ್ತಿನಲ್ಲಿ ಕೋಲಾಹಲ

ಸಂಸತ್​ನ ಮೂರನೇ ದಿನದ ಅಧಿವೇಶನ ಹಲವು ಕೋಲಾಹಲಗಳಿಗೆ ಸಾಕ್ಷಿಯಾಯ್ತು. ಸಮಾಜವಾದಿ ಪಕ್ಷದ ಸಂಸದ ನರೇಶ್​ ಅಗರ್​ವಾಲ್​ ವಿವಾದಾತ್ಮಕ ...

ನವದೆಹಲಿ: ಸಂಸತ್​ನ ಮೂರನೇ ದಿನದ ಅಧಿವೇಶನ ಹಲವು ಕೋಲಾಹಲಗಳಿಗೆ ಸಾಕ್ಷಿಯಾಯ್ತು. ಸಮಾಜವಾದಿ ಪಕ್ಷದ ಸಂಸದ ನರೇಶ್​ ಅಗರ್​ವಾಲ್​ ವಿವಾದಾತ್ಮಕ ಹೇಳಿಕೆಯಿಂದ ಸಂಸತ್ತಿನಲ್ಲಿ ಗದ್ದಲ ಕೋಲಾಹಲ ಸೃಷ್ಟಿಯಾಯ್ತು.
ಗೋ ರಕ್ಷಣೆ ಹೆಸರಿನಲ್ಲಿ ದೇಶಾದ್ಯಂತ ದಾಳಿಗಳಾಗುತ್ತಿರುವ ಕುರಿತು ಪ್ರಸ್ತಾಪಿಸಿದ ಎಸ್​ಪಿ ಸಂಸದ ನರೇಶ್​ ಅಗರ್​ವಾಲ್​ ಹಿಂದೂ ಧರ್ಮದ ಪ್ರತಿಯೊಬ್ಬ ದೇವರನ್ನು ಮದ್ಯಪಾನದ ಬ್ರ್ಯಾಂಡ್​ಗಳಿಗೆ ಹೋಲಿಸಿದ್ರು..
1991 ರಲ್ಲಿ ಶಾಲೆಯೊಂದಕ್ಕೆ ಭೇಟಿ ನೀಡಿದಾಗ  ಗೋರಕ್ಷಣೆ ಹೆಸರಲ್ಲಿ ನಡೆದ ಹತ್ಯೆಯ ಬಗ್ಗೆ ಮಾತನಾಡುತ್ತಾ ಕೆಲ ಹಿಂದೂ ದೇವತೆಗಳ ಹೆಸರನ್ನು ಆಲ್ಕೋಹಾಲ್ ಬ್ರ್ಯಾಂಡ್ ಗೆ ಹೋಲಿಸಿ ಶಾಲೆಯ ಗೋಡೆಯ ಮೇಲೆ ಬರೆಯಲಾಗಿತ್ತು ಎಂದು ತಿಳಿಸಿದರು. ಕಜಾಂಚಿಗಳ ಬೆಂಚ್ ಕಡೆ ಕೈ ತೋರಿಸುತ್ತಾ ಇದನ್ನು ಬರೆದವರು ನಿಮ್ಮ ಜನಗಳು ಎಂದು ಹೇಳಿದರು. 
ಅಗರ್​ವಾಲ್​ ಹೇಳಿಕೆ ಖಂಡಿಸಿದ ಬಿಜೆಪಿ ನಾಯಕ ಅರುಣ್​ ಜೇಟ್ಲಿ ನೀವು ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಿರಾ.  ಒಂದು ವೇಳೆ ಸಂಸತ್ತಿನ ಹೊರಗೆ ನೀವು ಈ ಹೇಳಿಕೆ ನೀಡಿದ್ದರೇ  ವಿಚಾರಣೆಗೆ ಒಳಪಡಬೇಕಾಗಿತ್ತು. ನಿಮ್ಮ ಹೇಳಿಕೆ ಖಂಡನೀಯ ನೀವು ಕ್ಷಮೆಯಾಚಿಸಬೇಕು ಎಂದು ಜೇಟ್ಲಿ ಆಗ್ರಹಿಸಿದರು.
ಅಗರ್ ವಾಲ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಉಪ ಸಭಾಪತಿ ಪಿಜೆ. ಕುರಿಯನ್ ಆಗ್ರಹಿಸಿದರು. ನನ್ನ ಹೇಳಿಕೆ ಯಾರಿಗಾದರೂ ನೋವುಂಟು ಮಾಡಿದ್ದರೇ ನಾನು  ಆ  ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ನರೇಶ್ ಅಗರ್ ವಾಲ್ ತಿಳಿಸಿದರು. 
ಸದನವನ್ನು ಎರಡು ಬಾರಿ ಮುಂದೂಡಿದ ಉಪ ಸಭಾಪತಿ ಕುರಿಯನ್ ನರೇಶ್ ಅಗರ್ ವಾಲ್ ಹೇಳಿಕೆಯನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಆಗ್ರಹಿಸದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT