ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಓಲಾ ಚಾಲಕನಿಂದ ಅಪಹರಣಕ್ಕೊಳಗಾಗಿದ್ದ ತೆಲಂಗಾಣ ವೈದ್ಯನ ರಕ್ಷಣೆ

ಓಲಾ ಕ್ಯಾಬ್ ಚಾಲಕನಿಂದ ಅಪಹರಣಕ್ಕೊಳಗಾಗಿದ್ದ ತೆಲಂಗಾಣ ಮೂಲಕ ವೈದ್ಯ ಶ್ರೀಕಾಂತ್ ಗೌಡ್ ರನ್ನು ದೆಹಲಿ ಪೊಲೀಸರು ಬುಧವಾರ ರಕ್ಷಣೆ ಮಾಡಿದ್ದಾರೆ...

ಹೈದರಾಬಾದ್: ಓಲಾ ಕ್ಯಾಬ್ ಚಾಲಕನಿಂದ ಅಪಹರಣಕ್ಕೊಳಗಾಗಿದ್ದ ತೆಲಂಗಾಣ ಮೂಲಕ ವೈದ್ಯ ಶ್ರೀಕಾಂತ್ ಗೌಡ್ ರನ್ನು ದೆಹಲಿ ಪೊಲೀಸರು ಬುಧವಾರ ರಕ್ಷಣೆ ಮಾಡಿದ್ದಾರೆ. 
ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಕಾಂತ್ ಅವರು ಜು.6 ರಂದು ಅಪಹರಣಕ್ಕೊಳಗಾಗಿದ್ದರು. ಜು.6ರಂದು ಮೆಟ್ರೋ ನಿಲ್ದಾಣಕ್ಕೆ ಹೋಗುವ ಸಲುವಾಗಿ ಶ್ರೀಕಾಂತ್ ಅವರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ನೋಯ್ಡಾದ ದಾದ್ರಿ ಬಳಿ ಕಾರನ್ನು ನಿಲ್ಲಿಸಿದ್ದ ಚಾಲಕ ಗುಂಪೊಂದರ ಜೊತೆಗೆ ಸೇರಿಕೊಂಡು ಶ್ರೀಕಾಂತ್ ಅವರನ್ನು ಅಪಹರಿಸಿದ್ದ. 
ನಂತರ ಶ್ರೀಕಾಂತ್ ಅವರ ಕುಟುಂಬ ಸದಸ್ಯರಿಗೆ ಹಾಗೂ ಆಸ್ಪತ್ರೆಗೆ ಕರೆ ಮಾಡುತ್ತಿದ್ದ ಆರೋಪಿ ರೂ.5 ಕೋಟಿ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಪ್ರಕರಣ ಸಂಬಂಧ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ತನಿಖೆ ಆರೇಭಿಸಿದ್ದರು. 
ಇದರಂತೆ ಮುಜಾಫರ್ನಗರದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವೈದ್ಯ ಶ್ರೀಕಾಂತ್ ನನ್ನು ರಕ್ಷಣೆ ಮಾಡಿದ್ದಾರೆ. 
ಅಪಹರಣಕ್ಕೊಳಗಾಗಿದ್ದ ಶ್ರೀಕಾಂತ್ ಅವರು ಚೀನಾದಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದರು, ರಾಜಧಾನಿ ದೆಹಲಿಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದರು. 
ಶ್ರೀಕಾಂತ್ ಗೌಡ್'ರನ್ನು ರಕ್ಷಣೆ ಮಾಡಿರುವುದಕ್ಕೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಶ್ರೀಕಾಂತ್ ಸಂಬಂಧಿ ಶ್ರೀನಿವಾಸ್ ಗೌಡ್ ಮಾತನಾಡಿ, ಸಹೋದರನನ್ನು ಉತ್ತರಪ್ರದೇಶ ಹಾಗೂ ದೆಹಲಿ ಪೊಲೀಸರು ರಕ್ಷಣೆ ಮಾಡಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT