ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಭಾರತವೆಂದರೆ ಕಾಶ್ಮೀರ, ಕಾಶ್ಮೀರವೆಂದರೆ ಭಾರತ; ಮಧ್ಯಸ್ಥಿಕೆ ಬೇಡ: ರಾಹುಲ್ ಗಾಂಧಿ

ಕಾಶ್ಮೀರದ ವಿಚಾರದಲ್ಲಿ 3ನೇ ರಾಷ್ಟ್ರದ ಮಧ್ಯಸ್ಥಿಕೆ ವಹಿಸುವಂತೆ ಭಾರತ ಮನವಿ ಮಾಡಬೇಕೆಂಬ ಫರೂಖ್ ಅವರ ಹೇಳಿಕೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ತೀವ್ರವಾಗಿ ಕಿಡಿಕಾರಿದ್ದಾರೆ...

ನವದೆಹಲಿ: ಕಾಶ್ಮೀರದ ವಿಚಾರದಲ್ಲಿ 3ನೇ ರಾಷ್ಟ್ರದ ಮಧ್ಯಸ್ಥಿಕೆ ವಹಿಸುವಂತೆ ಭಾರತ ಮನವಿ ಮಾಡಬೇಕೆಂಬ ಫರೂಖ್ ಅವರ ಹೇಳಿಕೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಕಾಶ್ಮೀರ ವಿವಾದ ಸಂಬಂಧ ಫರೂಖ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತವೆಂದರೆ ಕಾಶ್ಮೀರ, ಕಾಶ್ಮೀರವೆಂದರೆ ಭಾರತ ಎಂದು ಹೇಳಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರದಲ್ಲಿರುವ ಅವರ ನೀತಿಗಳು ಜಮ್ಮು ಮತ್ತು ಕಾಶ್ಮೀರವನ್ನು ನಾಶ ಮಾಡುತ್ತಿದೆ. ಕಾಶ್ಮೀರದ ವಿವಾದ ಸಂಬಂಧ ಇದೀಗ 3ನೇ ರಾಷ್ಟ್ರ ಮಧ್ಯಸ್ಥಿಕೆ ವಹಿಸಬೇಕೆಂಬ ಹೇಳಿಕೆಗಳು ಕೇಳಿಬರತೊಡಗಿದೆ. ಇದು ನಿಜಕ್ಕೂ ತಪ್ಪು. ಭಾರತವೆಂದರೆ ಕಾಶ್ಮೀರ, ಕಾಶ್ಮೀರವೆಂದರೆ ಭಾರತ. 
ಕಾಶ್ಮೀರ ವಿವಾದ ನಮ್ಮ ಆಂತರಿಕ ವಿಚಾರ. ಈ ವಿಚಾರದಲ್ಲಿ ಮೂರನೇ ರಾಷ್ಟ್ರ ಮಧ್ಯಸ್ಥಿಕೆ ವಹಿಸುವ ಅಗತ್ಯವಿಲ್ಲ. ಯಾವುದೇ ರಾಷ್ಟ್ರ ಇದರಲ್ಲಿ ಏನನ್ನೂ ಹೇಳಬೇಕಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT