ಕಿರಣ್ ಬೇಡಿ 
ದೇಶ

ತಮ್ಮನ್ನು ಹಿಟ್ಲರ್ ರೀತಿ ಬಿಂಬಿಸಿದ ಕಾಂಗ್ರೆಸ್ ಪೋಸ್ಟರ್ ವಿರುದ್ಧ ಕಿರಣ್ ಬೇಡಿ ಕಿಡಿ

ಪುದುಚೆರಿ ಕಾಂಗ್ರೆಸ್ ಸರ್ಕಾರ ಹಾಗೂ ಅಲ್ಲಿನ ಲೆಫ್ಟಿನೆಂಟ್ ಗೌರ್ನರ್ ಕಿರಣ್ ಬೇಡಿ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಕಿರಣ್ ಬೇಡಿ ಅವರನ್ನು ಹಿಟ್ಲರ್ ರೀತಿ ಬಿಂಬಿಸಿ ಕಾಂಗ್ರೆಸ್ ಪಕ್ಷ ಪೋಸ್ಟರ್ ಹಾಕಿದೆ.

ಪುದುಚೆರಿ: ಪುದುಚೆರಿ ಕಾಂಗ್ರೆಸ್ ಸರ್ಕಾರ ಹಾಗೂ ಅಲ್ಲಿನ ಲೆಫ್ಟಿನೆಂಟ್ ಗೌರ್ನರ್ ಕಿರಣ್ ಬೇಡಿ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಕಿರಣ್ ಬೇಡಿ ಅವರನ್ನು ಹಿಟ್ಲರ್ ರೀತಿ ಬಿಂಬಿಸಿ ಕಾಂಗ್ರೆಸ್ ಪಕ್ಷ ಪೋಸ್ಟರ್ ಹಾಕಿದೆ. ಈ ಬಗ್ಗೆ ಕಿರಣ್ ಬೇಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಟ್ವಿಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಕಿರಣ್ ಬೇಡಿ, ತಮ್ಮನ್ನು ಹಿಟ್ಲರ್ ಮಾದರಿಯಲ್ಲಿ ಚಿತ್ರಿಸಿರುವ ಪೋಸ್ಟರ್ ನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಇದು ಸ್ಥಳೀಯ ಕಾಂಗ್ರೆಸ್ ಘಟಕದ ಕೆಲಸ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಕಿರಣ್ ಬೇಡಿ ವಿರುದ್ಧದ ಆಕ್ರೋಶಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಕಿರಣ್ ಬೇಡಿ ಆರೋಪಿಸಿದ್ದಾರೆ. 
ಪುದುಚೆರಿಯ ಮೂವರು ನಾಮನಿರ್ದೇಶಿತ ವಿಧಾನಸಭೆಯ ಸದಸ್ಯರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿರುವುದರ ವಿರುದ್ಧ ಕಾಂಗ್ರೆಸ್ ನ ನಾಯಕರು ಹಾಗೂ ಮುಖ್ಯಮಂತ್ರಿ ವಿ ನಾರಾಯಣ ಸ್ವಾಮಿ ಪ್ರತಿಭಟನೆ ನಡೆಸಿದ್ದರು. ಪುದುಚೆರಿ ಲೆಫ್ಟಿನೆಂಟ್ ಗೌರ್ನರ್ ಅವರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಅವರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಕಾಂಗ್ರೆಸ್ ಆಗ್ರಹಿಸಿದ್ದು, ಕಿರಣ್ ಬೇಡಿ ಅವರನ್ನು ಹಿಟ್ಲರ್ ರೀತಿಯಲ್ಲಿ ಚಿತ್ರಿಸಿರುವ ಪೋಸ್ಟರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT