ಸಾಂದರ್ಭಿಕ ಚಿತ್ರ 
ದೇಶ

ರಾಜಸ್ತಾನದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 9 ಮಂದಿ ಸಾವು, ಹಲವರು ಗಂಭೀರ!

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಉದಯ್ ಪುರ: ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ರಾಜಸ್ತಾನದ ಉದಯ್ ಪುರದ ನೆಹ್ಲಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ವೇಗದಲ್ಲಿದ್ದ ಬಸ್ ಚಾಲಕ ಮುಂದೆ ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಸ್ಟೇರಿಂಗ್ ತಿರುಗಿಸಿದ್ದಾನೆ, ಈ ವೇಳೆ ಬಸ್ ಪಲ್ಟಿಯಾಗಿ  9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಆರು ಮಹಿಳೆಯರು 3 ಮಂದಿ ಪುರುಷರು ಎಂದು ತಿಳಿದುಬಂದಿದೆ.

ಬಸ್ ನಿನ್ನೆ ರಾತ್ರಿಯಷ್ಟೇ ಅಹ್ಮದಾಬಾದ್ ನಿಂದ ಪುಷ್ಕರ್ ಮತ್ತು ಹರಿದ್ವಾರ ಸೇರಿದಂತೆ 16 ತೀರ್ಥಕ್ಷೇತ್ರಗಳಿಗೆ ಪ್ರವಾಸಿಗರನ್ನು ಹೊತ್ತು ಪ್ರಯಾಣ ಬೆಳೆಸಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ  ಗಾಯಾಳು ಪ್ರವಾಸಿಗರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT