ಲೋಕಸಭೆಯಲ್ಲಿ ಕೇಂದ್ರ ಸಚಿವ ಜಾವಡೇಕರ್ (ಸಂಗ್ರಹ ಚಿತ್ರ) 
ದೇಶ

5ರಿಂದ 8ನೇ ತರಗತಿ ವರೆಗಿನ ಕಡ್ಡಾಯ ಉತ್ತೀರ್ಣ ನೀತಿ ರದ್ದು: ಕೇಂದ್ರ ಸರ್ಕಾರ

ಐದರಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂಬ ನೀತಿಯನ್ನು ರದ್ದುಗೊಳಿಸುವ ಕುರಿತು ಕೇಂದ್ರ ಸರ್ಕಾರ ಸುಳಿವು ನೀಡಿದ್ದು, ಈ ಬಗ್ಗೆ ಹೊಸ ಮಸೂದೆ ಮಂಡಿಸುವುದಾಗಿ ತಿಳಿಸಿದೆ.

ನವದೆಹಲಿ: ಐದರಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂಬ ನೀತಿಯನ್ನು ರದ್ದುಗೊಳಿಸುವ ಕುರಿತು ಕೇಂದ್ರ ಸರ್ಕಾರ ಸುಳಿವು ನೀಡಿದ್ದು, ಈ ಬಗ್ಗೆ ಹೊಸ ಮಸೂದೆ ಮಂಡಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, "ನೋ ಡಿಟೆನ್ಶನ್ ಪಾಲಿಸಿಯಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಹಲವು ರಾಜ್ಯಗಳು  ಆತಂಕ ವ್ಯಕ್ತಪಡಿಸಿವೆ. ಹೀಗಾಗಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂದು ತಿಳಿಸಿದರು.

5ರಿಂದ 8ನೇ ತರಗತಿ ಮಕ್ಕಳು ಮಾರ್ಚ್ ​ನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇಲ್ಲಿ ಅನುತ್ತೀರ್ಣರಾದವರಿಗೆ ಮೇನಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಆಗಲೂ ಅವರು ಅನುತ್ತೀರ್ಣರಾದರೆ  ಅಂಥವರನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ಉಳಿಸಲಾಗುವುದು. ಅನುತ್ತೀರ್ಣಗೊಳಿಸಿದರೆ ಮಕ್ಕಳು ಪ್ರೇರಣೆ ಕಳೆದುಕೊಳ್ಳುತ್ತಾರೆ. ಕೆಲವು ಸಂದರ್ಭದಲ್ಲಿ ಶಾಶ್ವತವಾಗಿ ಶಾಲೆಯನ್ನೇ ತೊರೆಯಬಹುದು ಎಂಬ ಕಾರಣಕ್ಕೆ  ಈ ಹಿಂದೆ ನಿರ್ಬಂಧ ರಹಿತ ನೀತಿ ಜಾರಿಗೆ ತರಲಾಗಿತ್ತು ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT