ದೇಶ

ರಾಜಸ್ಥಾನದಲ್ಲಿ ಬಸ್ ಅಪಘಾತ, 9 ಯಾತ್ರಾರ್ಥಿಗಳು ಸಾವು

Lingaraj Badiger
ಜೈಪುರ: ಗುಜರಾತ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಶನಿವಾರ ರಾಜಸ್ಥಾನದ ಉದಯ್ ಪುರ ಸಮೀಪ ಪಲ್ಟಿಯಾಗಿದ್ದು, ಅಪಘಾತದಲ್ಲಿ ಆರು ಮಹಿಳೆಯರು ಸೇರಿದಂತೆ ಒಂಬತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದಯ್ ಪುರದಿಂದ 10 ಕಿ.ಮೀ ದೂರದಲ್ಲಿರುವ ನೆಹ್ಲಾ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಉದಯ್ ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಅವರು ಹೇಳಿದ್ದಾರೆ.
ಪುಷ್ಕರ ಹಾಗೂ ಹರಿದ್ವಾರ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳನ್ನೊಳಗೊಂಡ 16 ದಿನಗಳ ಪ್ರವಾಸಕ್ಕಾಗಿ ಖಾಸಗಿ ಬಸ್ ನಿನ್ನೆ ರಾತ್ರಿ ಗುಜರಾತ್ ನ ಅಹಮದಾಬಾದ್ ನಿಂದ ಹೊರಟಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.
ಗಾಯಾಳುಗಳನ್ನು ಉದಯ್ ಪುರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
SCROLL FOR NEXT