ಸಾಂದರ್ಭಿಕ ಚಿತ್ರ 
ದೇಶ

ಮೂರು ವರ್ಷಗಳಲ್ಲಿ 71,941 ಕೋಟಿ ರೂ.ಬಹಿರಂಗಪಡಿಸದ ಆದಾಯ ಪತ್ತೆ: ಸುಪ್ರೀಂ ಕೋರ್ಟ್ ಗೆ ಸರ್ಕಾರ

ಕಳೆದ ಮೂರು ವರ್ಷಗಳಿಂದ ಆದಾಯ ತೆರಿಗೆ ಇಲಾಖೆಯ ವ್ಯಾಪಕ ಶೋಧ, ವಶಪಡಿಸಿಕೊಳ್ಳುವಿಕೆ ಮತ್ತು...

ನವದೆಹಲಿ: ಕಳೆದ ಮೂರು ವರ್ಷಗಳಿಂದ ಆದಾಯ ತೆರಿಗೆ ಇಲಾಖೆಯ ವ್ಯಾಪಕ ಶೋಧ, ವಶಪಡಿಸಿಕೊಳ್ಳುವಿಕೆ ಮತ್ತು ಸಮೀಕ್ಷೆಗಳಿಂದ ಸುಮಾರು 71,941 ಕೋಟಿ ರೂಪಾಯಿ ಕಾಳಧನ(ಬಹಿರಂಗಪಡಿಸದ ಆದಾಯಗಳನ್ನು) ಪತ್ತೆಹಚ್ಚಲು ಸಾಧ್ಯವಾಯಿತು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಕಳೆದ ವರ್ಷ ನವೆಂಬರ್ 9ರ  ನೋಟು ಅಮಾನ್ಯತೆ ನಂತರ ಈ ವರ್ಷ ಜನವರಿ 10ರವರೆಗೆ ಒಟ್ಟು ಬಹಿರಂಗಪಡಿಸದ ಆದಾಯ 5,400 ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚಾಗಿದ್ದು, ವಶಪಡಿಸಿಕೊಳ್ಳಲಾಗಿರುವ ಚಿನ್ನದ ಮೌಲ್ಯ 303.367 ಕೆಜಿಗಳಷ್ಟು ಎಂದು ಹಣಕಾಸು ಸಚಿವಾಲಯ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ ಹೇಳಿದೆ.
ಏಪ್ರಿಲ್ 2014ರಿಂದ ಈ ವರ್ಷ ಫೆಬ್ರವರಿ 28ರವರೆಗೆ ಮೂರು ವರ್ಷಗಳ ನೋಟು ಅಮಾನ್ಯತೆ ಸಮಯ ಸೇರಿದಂತೆ ಲೆಕ್ಕವಿಲ್ಲದ ಆದಾಯದ ವಿವರಗಳನ್ನು ಇಲಾಖೆ ನೀಡಿದೆ.
ಮೂರು ವರ್ಷಗಳ ಅವಧಿಯಲ್ಲಿ ಆದಾಯ ತೆರಿಗೆ ಇಲಾಖೆ 2,027ಕ್ಕೂ ಅಧಿಕ ಗುಂಪುಗಳ ಮೇಲೆ ಶೋಧ ಕಾರ್ಯ ನಡೆಸಿ 36,051 ಕೋಟಿ ರೂಪಾಯಿಗೂ ಅಧಿಕ ಬಹಿರಂಗಪಡಿಸದ ಆದಾಯಗಳ ವಿವರ ನೀಡಿದೆ. ಬಹಿರಂಗಪಡಿಸದ ಸಂಪತ್ತು 2,890 ಕೋಟಿ ರೂಪಾಯಿ ಹೆಚ್ಚುವರಿಯಾಗಿದೆ ಎಂದು ಹೇಳಿದೆ.
ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಇಲಾಖೆ 15,000ಕ್ಕೂ ಅಧಿಕ ಶೋಧ ಕಾರ್ಯ ನಡೆಸಿದ್ದು ಇದರಿಂದಾಗಿ 33,000 ಕೋಟಿ ರೂಪಾಯಿಗೂ ಅಧಿಕ ಬಹಿರಂಗಪಡಿಸದ ಆದಾಯ ಪತ್ತೆಯಾಗಿದೆ.
ಅಧಿಕ ಮೌಲ್ಯದ ನೋಟುಗಳ ಅಮಾನ್ಯತೆ ನಂತರದ ಸಾಧನೆ ಬಗ್ಗೆ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ  ಕಳೆದ ವರ್ಷ ನವೆಂಬರ್ 9ರ ನಂತರ ಎರಡು ತಿಂಗಳುಗಳಲ್ಲಿ ಆದಾಯ ತೆರಿಗೆ ಇಲಾಖೆ ಗಮನಾರ್ಹವಾಗಿ ದೊಡ್ಡ ಸಂಖ್ಯೆಯಲ್ಲಿ ಜಾರಿ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT