ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ 
ದೇಶ

ಸೆಪ್ಟೆಂಬರ್ ನಿಂದ ಪ್ರತಿ ತಿಂಗಳು 18ರಂದು ಸ್ವಯಂಸೇವಕರ ಸಭೆ: ಮಾಯಾವತಿ

ಉತ್ತರ ಪ್ರದೇಶದ 18 ವಿಭಾಗಗಳಲ್ಲಿ ಸೆಪ್ಟೆಂಬರ್ 18ರಂದು ಸಭೆ ಸೇರುವ ಮೂಲಕ ಪ್ರತಿ ತಿಂಗಳು 18ನೇ...

ನವದೆಹಲಿ: ಉತ್ತರ ಪ್ರದೇಶದ 18 ವಿಭಾಗಗಳಲ್ಲಿ ಸೆಪ್ಟೆಂಬರ್ 18ರಂದು ಸಭೆ ಸೇರುವ ಮೂಲಕ ಪ್ರತಿ ತಿಂಗಳು 18ನೇ ತಾರೀಖಿನಂದು  ಸ್ವಯಂಸೇವಕರ  ಸಭೆ ನಡೆಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 18ನೇ ತಾರೀಖಿನಂದು ತಾವು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದು ಆ ದಿನವನ್ನು ಪಕ್ಷದ ಕಾರ್ಯಕರ್ತರು ಮರೆಯಲು ಸಾಧ್ಯವಿಲ್ಲ.ಹೀಗಾಗಿ ಆ ತಾರೀಖನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಹೇಳಿದರು.
ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ದಿನದಂದು ಪ್ರತಿ ಪ್ರದೇಶದಲ್ಲಿ ವಿವಿಧ ನಾಯಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಲಾಗುವುದು. ಮೊದಲ ರ್ಯಾಲಿಯನ್ನು ಮೀರತ್-ಸಹರಾನ್ ಪುರದಲ್ಲಿ ನಡೆಸಲಾಗುವುದು. ಮುಂದಿನ ವರ್ಷ ಜೂನ್ ನಂತರ ಕಾರ್ಯಕ್ರಮಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.
ಕಳೆದ ವಾರ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಮಾಯಾವತಿಯವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು