ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ 
ದೇಶ

ಸೆಪ್ಟೆಂಬರ್ ನಿಂದ ಪ್ರತಿ ತಿಂಗಳು 18ರಂದು ಸ್ವಯಂಸೇವಕರ ಸಭೆ: ಮಾಯಾವತಿ

ಉತ್ತರ ಪ್ರದೇಶದ 18 ವಿಭಾಗಗಳಲ್ಲಿ ಸೆಪ್ಟೆಂಬರ್ 18ರಂದು ಸಭೆ ಸೇರುವ ಮೂಲಕ ಪ್ರತಿ ತಿಂಗಳು 18ನೇ...

ನವದೆಹಲಿ: ಉತ್ತರ ಪ್ರದೇಶದ 18 ವಿಭಾಗಗಳಲ್ಲಿ ಸೆಪ್ಟೆಂಬರ್ 18ರಂದು ಸಭೆ ಸೇರುವ ಮೂಲಕ ಪ್ರತಿ ತಿಂಗಳು 18ನೇ ತಾರೀಖಿನಂದು  ಸ್ವಯಂಸೇವಕರ  ಸಭೆ ನಡೆಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 18ನೇ ತಾರೀಖಿನಂದು ತಾವು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದು ಆ ದಿನವನ್ನು ಪಕ್ಷದ ಕಾರ್ಯಕರ್ತರು ಮರೆಯಲು ಸಾಧ್ಯವಿಲ್ಲ.ಹೀಗಾಗಿ ಆ ತಾರೀಖನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಹೇಳಿದರು.
ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ದಿನದಂದು ಪ್ರತಿ ಪ್ರದೇಶದಲ್ಲಿ ವಿವಿಧ ನಾಯಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಲಾಗುವುದು. ಮೊದಲ ರ್ಯಾಲಿಯನ್ನು ಮೀರತ್-ಸಹರಾನ್ ಪುರದಲ್ಲಿ ನಡೆಸಲಾಗುವುದು. ಮುಂದಿನ ವರ್ಷ ಜೂನ್ ನಂತರ ಕಾರ್ಯಕ್ರಮಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.
ಕಳೆದ ವಾರ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಮಾಯಾವತಿಯವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT