ಅಪರಾಧಿ ಸುರೇಂದ್ರ ಕೋಲಿ (ಸಂಗ್ರಹ ಚಿತ್ರ) 
ದೇಶ

ನಿಥಾರಿ ಸರಣಿ ಹತ್ಯೆ ಪ್ರಕರಣ: ಪಂದೆರ್, ಸುರೇಂದ್ರ ಕೋಲಿಗೆ ಗಲ್ಲು ಶಿಕ್ಷೆ

ಇಡೀ ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸಿಥಾರಿ ಅತ್ಯಾಚಾರ ಮತ್ತು ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೊನೀಂದರ್ ಸಿಂಗ್ ಪಂದೆರ್ ಮತ್ತು ಸುರೇಂದ್ರ ಕೋಲಿಗೆ ಸಿಬಿಐ ವಿಶೇಷ ನ್ಯಾಯಾಲಯ...

ಘಜಿಯಾಬಾದ್: ಇಡೀ ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸಿಥಾರಿ ಅತ್ಯಾಚಾರ ಮತ್ತು ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೊನೀಂದರ್ ಸಿಂಗ್ ಪಂದೆರ್ ಮತ್ತು ಸುರೇಂದ್ರ ಕೋಲಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ. 

20 ವರ್ಷದ ಯುವತಿ ಪಿಂಕಿ ಸರ್ಕಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಧೀಶರಾದ ಪವನ್ ತಿವಾರಿಯವರು ತೀರ್ಪು ಪ್ರಕಟಿಸಿದ್ದಾರೆ. ನೋಯ್ಡಾದ ನಿತಾರಿಯಲ್ಲಿ ನಡೆದಿದ್ದ 16 ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಪೈಕಿ ಇದೂ ಒಂದಾಗಿದೆ.

16 ಪ್ರಕರಣಗಳ ಪೈಕಿ 8 ಪ್ರಕರಣಗಳಲ್ಲಿ ತೀರ್ಪು ಪ್ರಕಟಗೊಂಡಿದೆ. ಪ್ರಮುಖ ಆರೋಪಿ ಸುರೇಂದ್ರ ಕೋಲಿಗೆ ನ್ಯಾಯಾಲಯ ಎಲ್ಲಾ ಪ್ರಕರಣದಲ್ಲಿ ಗರಿಷ್ಠ ಶಿಕ್ಷೆ ವಿಧಿಸಿದೆ. 

ಮಹಿಳೆ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ದೊರಕಿರುವ ವಿಧಿವಿಜ್ಞಾನ ಪ್ರಯೋಗಾಲಯದ ಸಾಕ್ಷ್ಯಾಧಾರಗಳಿನುಸಾರವಾಗಿ ಇಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ವಕೀಲ ಜೆ.ಪಿ. ಶರ್ಮಾ ಅವರು ಆರೋಪಿಗಳಿಗೆ ಮರಣ ದಂಡನೆ ನೀಡುವಂತೆ ಮನವಿ ಮಾಡಿದ್ದರು. 
2006ರ ಅಕ್ಟೋಬರ್ 5 ಕೆಲಸದಿಂದ ಮನೆ ಮಹಿಳೆಯೊಬ್ಬರು ಹಿಂತಿರುಗುತ್ತಿದ್ದರು. ಆರೋಪಿ ಪಂದೆರ್ ಮನೆಯ ಬಳಿ ಬರುತ್ತಿದ್ದ ಮಹಿಳೆಯನ್ನು ನೋಡಿದ್ದ ಕೋಲಿ ಆಕೆಯ ಮೇಲೆ ಆಕರ್ಷಿತ ಗೊಂಡಿದ್ದಾರೆ. ನಂತರ ಮನೆಯೊಳಗೆ ಮಹಿಳೆಯನ್ನು ಬಲವಂತದಿಂದ ಕರೆದೊಯ್ಡು ಆಕೆಯ ಮೇಲೆ ಅತ್ಯಾಚಾರವೆಸಗಲಿ ರುಂಡವನ್ನು ಕತ್ತರಿಸಿ ಹತ್ಯೆ ಮಾಡಿದ್ದ. ತನಿಖೆ ನಡೆಸುತ್ತಿದ್ದ ವೇಳೆ ಪಂದೆರ್ ಮನೆಯ ಹಿಂಭಾಗದಲ್ಲಿ ಮಹಿಳೆಯ ರುಂಡ ದೊರಕಿತ್ತು. ಇದಾದ ಬಳಿಕ ಹವಾರು ಮಾನವ ಅವಶೇಷಗಳು ಪತ್ತೆಯಾಗಿದ್ದವು. ಇದರಂತೆ ಸರಣಿ ಕಗ್ಗೊಲೆ ಪ್ರಕಱಣಗಳು ಬೆಳಕಿಗೆ ಬಂತಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!