ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ 
ದೇಶ

ಹುರಿಯತ್ ನಾಯಕರಿಗೆ ಪಾಕ್ ನಿಂದ ಮಾತ್ರವಲ್ಲ, ಭಾರತದಿಂದಲೂ ಹಣ ಸಂದಾಯ: ಫಾರೂಕ್ ಅಬ್ದುಲ್ಲಾ

ಹುರಿಯತ್ ನಾಯಕರಿಗೆ ಕೇವಲ ಪಾಕಿಸ್ತಾನದಿಂದ ಮಾತ್ರವಲ್ಲ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿದೆ ಎಂದು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿ: ಹುರಿಯತ್ ನಾಯಕರಿಗೆ ಕೇವಲ ಪಾಕಿಸ್ತಾನದಿಂದ ಮಾತ್ರವಲ್ಲ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿದೆ ಎಂದು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.

ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಆರೋಪದಡಿಯಲ್ಲಿ ಹುರಿಯತ್ ನಾಯಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರು, ಹುರಿಯತ್  ನಾಯಕರಿಗೆ ಪಾಕಿಸ್ತಾನದಿಂದ ಮಾತ್ರವಲ್ಲ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.

ನಾನು ಹೆಸರು ಹೇಳಲು ಇಚ್ಛಿಸುವುದಿಲ್ಲ. ಆದರೆ ಹುರಿಯತ್ ನಾಯಕರಿಗೆ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿದೆ. ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ಭಾರತದ ಗುಪ್ತಚರ ಸಂಸ್ಥೆ "ರಾ"ದ ಮಾಜಿ ಮುಖ್ಯಸ್ಥ ದುಲತ್  ಅವರ ಪುಸ್ತಕವನ್ನು ಓದಿ..ಅದರಲ್ಲಿ ಈ ಬಗ್ಗೆ ಸಮಗ್ರ ಮಾಹಿತಿ ಇದೆ. ನನ್ನ ಅಭಿಪ್ರಾಯದಂತೆ ಉಭಯ ದೇಶಗಳ ನಡುವೆ ಅಂದರೆ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ದ್ವಿಪಕ್ಷೀಯ ಚರ್ಚೆ ಪುನಃ ಆರಂಭವಾಗುವವರೆಗೂ  ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆ ಸಮಸ್ಯೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ದ್ವಿಪಕ್ಷೀಯ ಮಾತುಕತೆಗೆ ಉಭಯ ದೇಶಗಳ ಪ್ರಧಾನಿಗಳೇ ಪಾಲ್ಗೊಳ್ಳಬೇಕು ಎಂದೇನಿಲ್ಲ..ಸಂಸದೀಯ ಸಮಿತಿಯನ್ನು ಕೂಡ ಕಳುಹಿಸಿಕೊಡಬಹುದು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲಾಂಯಂ ಸಿಂಗ್  ರಂತಹ ವಿಶೇಷ ವ್ಯಕ್ತಿಗಳನ್ನು ಕೂಡ ಕಳುಹಿಸಿಕೊಡಬಹುದು ಎಂದು ಫಾರೂಕ್ ಅಬ್ದುಲ್ಲಾ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT