ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ 
ದೇಶ

ಹುರಿಯತ್ ನಾಯಕರಿಗೆ ಪಾಕ್ ನಿಂದ ಮಾತ್ರವಲ್ಲ, ಭಾರತದಿಂದಲೂ ಹಣ ಸಂದಾಯ: ಫಾರೂಕ್ ಅಬ್ದುಲ್ಲಾ

ಹುರಿಯತ್ ನಾಯಕರಿಗೆ ಕೇವಲ ಪಾಕಿಸ್ತಾನದಿಂದ ಮಾತ್ರವಲ್ಲ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿದೆ ಎಂದು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿ: ಹುರಿಯತ್ ನಾಯಕರಿಗೆ ಕೇವಲ ಪಾಕಿಸ್ತಾನದಿಂದ ಮಾತ್ರವಲ್ಲ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿದೆ ಎಂದು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.

ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಆರೋಪದಡಿಯಲ್ಲಿ ಹುರಿಯತ್ ನಾಯಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರು, ಹುರಿಯತ್  ನಾಯಕರಿಗೆ ಪಾಕಿಸ್ತಾನದಿಂದ ಮಾತ್ರವಲ್ಲ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.

ನಾನು ಹೆಸರು ಹೇಳಲು ಇಚ್ಛಿಸುವುದಿಲ್ಲ. ಆದರೆ ಹುರಿಯತ್ ನಾಯಕರಿಗೆ ಭಾರತ ಸರ್ಕಾರದಿಂದಲೂ ಹಣ ಸಂದಾಯವಾಗುತ್ತಿದೆ. ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ಭಾರತದ ಗುಪ್ತಚರ ಸಂಸ್ಥೆ "ರಾ"ದ ಮಾಜಿ ಮುಖ್ಯಸ್ಥ ದುಲತ್  ಅವರ ಪುಸ್ತಕವನ್ನು ಓದಿ..ಅದರಲ್ಲಿ ಈ ಬಗ್ಗೆ ಸಮಗ್ರ ಮಾಹಿತಿ ಇದೆ. ನನ್ನ ಅಭಿಪ್ರಾಯದಂತೆ ಉಭಯ ದೇಶಗಳ ನಡುವೆ ಅಂದರೆ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ದ್ವಿಪಕ್ಷೀಯ ಚರ್ಚೆ ಪುನಃ ಆರಂಭವಾಗುವವರೆಗೂ  ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆ ಸಮಸ್ಯೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ದ್ವಿಪಕ್ಷೀಯ ಮಾತುಕತೆಗೆ ಉಭಯ ದೇಶಗಳ ಪ್ರಧಾನಿಗಳೇ ಪಾಲ್ಗೊಳ್ಳಬೇಕು ಎಂದೇನಿಲ್ಲ..ಸಂಸದೀಯ ಸಮಿತಿಯನ್ನು ಕೂಡ ಕಳುಹಿಸಿಕೊಡಬಹುದು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲಾಂಯಂ ಸಿಂಗ್  ರಂತಹ ವಿಶೇಷ ವ್ಯಕ್ತಿಗಳನ್ನು ಕೂಡ ಕಳುಹಿಸಿಕೊಡಬಹುದು ಎಂದು ಫಾರೂಕ್ ಅಬ್ದುಲ್ಲಾ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT