ಸಾಂದರ್ಭಿಕ ಚಿತ್ರ 
ದೇಶ

ಆರ್ ಎಸ್‌ಎಸ್‌ ಮುಸ್ಲಿಂ ಘಟಕದಿಂದ ‘ರಕ್ಷಾಬಂಧನ ಅಭಿಯಾನ’

ಭ್ರಾತೃತ್ವ ಬೆಳೆಸುವ ಉದ್ದೇಶದಿಂದ ದೇಶಾದ್ಯಂತ ‘ರಾಖಿ ಅಭಿಯಾನ’ ನಡೆಸುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ....

ನವದೆಹಲಿ: ಭ್ರಾತೃತ್ವ ಬೆಳೆಸುವ ಉದ್ದೇಶದಿಂದ ದೇಶಾದ್ಯಂತ ‘ರಕ್ಷಾಬಂಧನ ಅಭಿಯಾನ’ ನಡೆಸುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ದ ಮುಸ್ಲಿಂ ಘಟಕ ಮಂಗಳವಾರ ಹೇಳಿದೆ.
ಆಗಸ್ಟ್ 3ರಿಂದ ರಾಖಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, ಮುಸ್ಲಿಂ ಯುವತಿಯರು ಹಿಂದೂ ಯುವಕರಿಗೆ ರಾಖಿ ಕಟ್ಟಲಿದ್ದಾರೆ. ಹಾಗೆಯೇ ಹಿಂದೂ ಯುವತಿಯರು ಮುಸ್ಲಿಂ ಯುವಕರಿಗೆ ರಾಖಿ ಕಟ್ಟಿ ಶುಭಕೋರಲಿದ್ದಾರೆ ಎಂದು ಮುಸ್ಲಿಂ ರಾಷ್ಟ್ರೀಯ ಮಂಚ್(ಎಂಆರ್ಎಂ) ವಕ್ತಾರ ಮೊಹಮ್ಮದ್ ಅಫ್ಜಲ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಆಗಸ್ಟ್‌ 3ರಂದು ಜೈಪುರದಲ್ಲಿ, ಆಗಸ್ಟ್ 5 ಮತ್ತು 6ರಂದು ದೆಹಲಿ, ಲಖನೌದಲ್ಲಿ ರಾಖಿ ಅಭಿಯಾನದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೆ ದೇಶದ 12 ರಾಜ್ಯಗಳಲ್ಲಿ ಈ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದ್ದು, ಹಿಂದು ಮತ್ತು ಮುಸ್ಲಿಮರಲ್ಲಿ ಭ್ರಾತೃತ್ವ ಬೆಳೆಸುವುದು ಹಾಗೂ ಉಭಯ ಧರ್ಮೀಯರು ಎರಡೂ ಧರ್ಮದವರ ರಕ್ಷಣೆ ಮಾಡುವುದಾಗಿ ಕಂಕಣ ತೊಡುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಅಫ್ಜಲ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT