ಸಾಂದರ್ಭಿಕ ಚಿತ್ರ 
ದೇಶ

ಆರ್ ಎಸ್‌ಎಸ್‌ ಮುಸ್ಲಿಂ ಘಟಕದಿಂದ ‘ರಕ್ಷಾಬಂಧನ ಅಭಿಯಾನ’

ಭ್ರಾತೃತ್ವ ಬೆಳೆಸುವ ಉದ್ದೇಶದಿಂದ ದೇಶಾದ್ಯಂತ ‘ರಾಖಿ ಅಭಿಯಾನ’ ನಡೆಸುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ....

ನವದೆಹಲಿ: ಭ್ರಾತೃತ್ವ ಬೆಳೆಸುವ ಉದ್ದೇಶದಿಂದ ದೇಶಾದ್ಯಂತ ‘ರಕ್ಷಾಬಂಧನ ಅಭಿಯಾನ’ ನಡೆಸುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ದ ಮುಸ್ಲಿಂ ಘಟಕ ಮಂಗಳವಾರ ಹೇಳಿದೆ.
ಆಗಸ್ಟ್ 3ರಿಂದ ರಾಖಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, ಮುಸ್ಲಿಂ ಯುವತಿಯರು ಹಿಂದೂ ಯುವಕರಿಗೆ ರಾಖಿ ಕಟ್ಟಲಿದ್ದಾರೆ. ಹಾಗೆಯೇ ಹಿಂದೂ ಯುವತಿಯರು ಮುಸ್ಲಿಂ ಯುವಕರಿಗೆ ರಾಖಿ ಕಟ್ಟಿ ಶುಭಕೋರಲಿದ್ದಾರೆ ಎಂದು ಮುಸ್ಲಿಂ ರಾಷ್ಟ್ರೀಯ ಮಂಚ್(ಎಂಆರ್ಎಂ) ವಕ್ತಾರ ಮೊಹಮ್ಮದ್ ಅಫ್ಜಲ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಆಗಸ್ಟ್‌ 3ರಂದು ಜೈಪುರದಲ್ಲಿ, ಆಗಸ್ಟ್ 5 ಮತ್ತು 6ರಂದು ದೆಹಲಿ, ಲಖನೌದಲ್ಲಿ ರಾಖಿ ಅಭಿಯಾನದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೆ ದೇಶದ 12 ರಾಜ್ಯಗಳಲ್ಲಿ ಈ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದ್ದು, ಹಿಂದು ಮತ್ತು ಮುಸ್ಲಿಮರಲ್ಲಿ ಭ್ರಾತೃತ್ವ ಬೆಳೆಸುವುದು ಹಾಗೂ ಉಭಯ ಧರ್ಮೀಯರು ಎರಡೂ ಧರ್ಮದವರ ರಕ್ಷಣೆ ಮಾಡುವುದಾಗಿ ಕಂಕಣ ತೊಡುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಅಫ್ಜಲ್‌ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

'ಭಾರತ ಕೂಡ ಸೋತಿದೆ' ಎಂದ PCB, ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board

ಹೊಲದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ: ಗದರಿದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಂದ ಯುವಕ!

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್, ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!