ಸಾಂದರ್ಭಿಕ ಚಿತ್ರ 
ದೇಶ

ಆರ್ ಎಸ್‌ಎಸ್‌ ಮುಸ್ಲಿಂ ಘಟಕದಿಂದ ‘ರಕ್ಷಾಬಂಧನ ಅಭಿಯಾನ’

ಭ್ರಾತೃತ್ವ ಬೆಳೆಸುವ ಉದ್ದೇಶದಿಂದ ದೇಶಾದ್ಯಂತ ‘ರಾಖಿ ಅಭಿಯಾನ’ ನಡೆಸುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ....

ನವದೆಹಲಿ: ಭ್ರಾತೃತ್ವ ಬೆಳೆಸುವ ಉದ್ದೇಶದಿಂದ ದೇಶಾದ್ಯಂತ ‘ರಕ್ಷಾಬಂಧನ ಅಭಿಯಾನ’ ನಡೆಸುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ದ ಮುಸ್ಲಿಂ ಘಟಕ ಮಂಗಳವಾರ ಹೇಳಿದೆ.
ಆಗಸ್ಟ್ 3ರಿಂದ ರಾಖಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, ಮುಸ್ಲಿಂ ಯುವತಿಯರು ಹಿಂದೂ ಯುವಕರಿಗೆ ರಾಖಿ ಕಟ್ಟಲಿದ್ದಾರೆ. ಹಾಗೆಯೇ ಹಿಂದೂ ಯುವತಿಯರು ಮುಸ್ಲಿಂ ಯುವಕರಿಗೆ ರಾಖಿ ಕಟ್ಟಿ ಶುಭಕೋರಲಿದ್ದಾರೆ ಎಂದು ಮುಸ್ಲಿಂ ರಾಷ್ಟ್ರೀಯ ಮಂಚ್(ಎಂಆರ್ಎಂ) ವಕ್ತಾರ ಮೊಹಮ್ಮದ್ ಅಫ್ಜಲ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಆಗಸ್ಟ್‌ 3ರಂದು ಜೈಪುರದಲ್ಲಿ, ಆಗಸ್ಟ್ 5 ಮತ್ತು 6ರಂದು ದೆಹಲಿ, ಲಖನೌದಲ್ಲಿ ರಾಖಿ ಅಭಿಯಾನದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೆ ದೇಶದ 12 ರಾಜ್ಯಗಳಲ್ಲಿ ಈ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದ್ದು, ಹಿಂದು ಮತ್ತು ಮುಸ್ಲಿಮರಲ್ಲಿ ಭ್ರಾತೃತ್ವ ಬೆಳೆಸುವುದು ಹಾಗೂ ಉಭಯ ಧರ್ಮೀಯರು ಎರಡೂ ಧರ್ಮದವರ ರಕ್ಷಣೆ ಮಾಡುವುದಾಗಿ ಕಂಕಣ ತೊಡುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಅಫ್ಜಲ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT