ಸುಬ್ರತಾ ರಾಯ್ 
ದೇಶ

ಸೆ.7ರೊಳಗೆ 1,500 ಕೋಟಿ ರು.ಜಮೆ ಮಾಡಿ: ಸಹರಾ ಮುಖ್ಯಸ್ಥನಿಗೆ ಸುಪ್ರೀಂ ಸೂಚನೆ

ಸೆಪ್ಟೆಂಬರ್ 7ರೊಳಗೆ ಸೆಬಿ-ಸಹರಾ ಮರುಪಾವತಿ ಖಾತೆಗೆ 1,500 ಕೋಟಿ ರುಪಾಯಿ ಜಮೆ ಮಾಡುವಂತೆ ಸಹಾರಾ ಸಮೂಹ....

ನವದೆಹಲಿ: ಸೆಪ್ಟೆಂಬರ್ 7ರೊಳಗೆ ಸೆಬಿ-ಸಹರಾ ಮರುಪಾವತಿ ಖಾತೆಗೆ 1,500 ಕೋಟಿ ರುಪಾಯಿ ಜಮೆ ಮಾಡುವಂತೆ ಸಹಾರಾ ಸಮೂಹ ಕಂಪನಿಗಳ ಮುಖ್ಯಸ್ಥ ಸುಬ್ರತಾ ರಾಯ್‌ ಅವರಿಗೆ ಮಂಗಳವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ. 
ಜುಲೈ 15ರೊಳಗೆ ಸೆಬಿ ಖಾತೆಗೆ ಜಮೆ ಮಾಡಬೇಕಿದ್ದ 552.21 ಕೋಟಿ ರುಪಾಯಿಗಳ ಪೈಕಿ 247 ಕೋಟಿ ರು.ಜಮೆ ಮಾಡಲಾಗಿದೆ. ಉಳಿದ 305.21 ಕೋಟಿ ರುಪಾಯಿಯನ್ನು ಆಗಸ್ಟ್ 12ರೊಳಗೆ ಜಮೆ ಮಾಡುವುದಾಗಿ ಎಂದು ರಾಯ್ ಪರ ವಕೀಲ ಕಪಿಲ್ ಸಿಬಲ್ ಅವರು ಇಂದು ಕೋರ್ಟ್ ಗೆ ತಿಳಿಸಿದರು.
ರಾಯ್ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ದೀಪಕ್ ಮಿಸ್ರಾ ನೇತೃತ್ವದ ತ್ರಿಸದಸ್ಯ ಪೀಠ, ಬಾಕಿ 305 ಕೋಟಿ ಸೇರಿದಂತೆ ಸೆಪ್ಟೆಂಬರ್ 7ರೊಳಗೆ ಒಟ್ಟು 1,500 ಕೋಟಿ ಜಮೆ ಮಾಡುವಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಿದೆ.
ವಸತಿ ಯೋಜನೆ ಹೆಸರಿನಲ್ಲಿ ಸಾರ್ವಜನಿಕ ಹೂಡಿಕೆದಾರರನ್ನು ವಂಚಿಸಿ, ಹೂಡಿಕೆ ಹಣ ಹಿಂದಿರುಗಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನುರಹಿತ ವಾರಂಟ್ ಹೊರಡಿಸಿ ಬಂಧನಕ್ಕೆ ಆದೇಶ ನೀಡಿತ್ತು. ಇದಾದ ಬಳಿಕ ತಲೆಮರೆಸಿಕೊಂಡಿದ್ದ ಸುಬ್ರತಾರಾಯ್ ಅವರು ಲಖನೌದಲ್ಲಿ ಪೊಲೀಸರ ಎದುರು ಶರಣಾಗಿ ಜೈಲು ಪಾಲಾಗಿದ್ದರು. 
2014ರಲ್ಲಿ ಬಂಧಿತರಾಗಿದ್ದ ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಈಗ ಪೆರೋಲ್ ಮೇಲೆ ಹೊರ ಬಂದಿದ್ದು, ಇತ್ತೀಚಿಗಷ್ಟೆ ಸುಪ್ರೀಂಕೋರ್ಟ್ ಪರೋಲ್ ಅವಧಿಯನ್ನು ಅಕ್ಟೋಬರ್ 10ರವರೆಗೆ ವಿಸ್ತರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT