ಸಂಗ್ರಹ ಚಿತ್ರ 
ದೇಶ

ಮಗನ ವಿರುದ್ಧ ಭ್ರಷ್ಟಾಚಾರ ಆರೋಪ ನಿರಾಕರಿಸಿದ ವೆಂಕಯ್ಯ ನಾಯ್ಡು!

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪವೊಂದು ಕೇಳಿಬಂದಿದ್ದು, ಆರೋಪ ಅಲ್ಲಗಳೆದಿರುವ ವೆಂಕಯ್ಯ ನಾಯ್ಡು ಅವರು ಇದು ರಾಜಕೀಯ ದುರುದ್ದೇಶದ ಆರೋಪ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ.

ನವದೆಹಲಿ: ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪವೊಂದು ಕೇಳಿಬಂದಿದ್ದು, ಆರೋಪ ಅಲ್ಲಗಳೆದಿರುವ ವೆಂಕಯ್ಯ ನಾಯ್ಡು ಅವರು ಇದು ರಾಜಕೀಯ ದುರುದ್ದೇಶದ  ಆರೋಪ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ.

ಮೂಲಗಳ ಪ್ರಕಾರ ವೆಂಕಯ್ಯ ನಾಯ್ಡು ಅವರ ಮಕ್ಕಳು ತೆಲಂಗಾಣ ಹಾಗೂ ಮಧ್ಯಪ್ರದೇಶ ಸರ್ಕಾರಗಳಿಂದ ಪ್ರಯೋಜನ ಪಡೆದು, ಭೂ ಕಬಳಿಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆಪಾದಿಸಿದೆ. ಕುಟುಂಬದ ಜತೆಗೆ ನಂಟು  ಹೊಂದಿರುವ ವ್ಯವಹಾರ ಮತ್ತು ಟ್ರಸ್ಟ್‌ಗಳ ವಹಿವಾಟಿಗೆ ಉತ್ತೇಜನ ನೀಡಲಾಗಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಆರೋಪವಾಗಿದೆ. ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ  ಮುಖಂಡ ಜೈರಾಮ್ ರಮೇಶ್ ಅವರು, "ಸಾರ್ವಜನಿಕ ಜೀವನದಲ್ಲಿ ತಾವು ಪಾರದರ್ಶಕ, ಹೊಣೆಗಾರಿಕೆ, ಪ್ರಾಮಾಣಿಕತೆಯ ಚಾಂಪಿಯನ್ ಎಂದು ಹೇಳಿಕೊಳ್ಳುತ್ತಿರುವ ನಾಯ್ಡು, ತಾವು ಸ್ವಚ್ಛ ಎನ್ನುವುದನ್ನು ಸಾಬೀತುಪಡಿಸಲಿ"  ಎಂದು ಸವಾಲು ಹಾಕಿದ್ದರು.

"ನಾಯ್ಡು ಅವರ ಪುತ್ರಿಯ ಸ್ವರ್ಣಭಾರತಿ ಟ್ರಸ್ಟ್ ಹೈದ್ರಾಬಾದ್ ಮೆಟ್ರೋಪಾಲಿಟನ್ ಡೆವಲಪ್‌ ಮೆಂಟ್ ಆಥಾರಿಟಿಗೆ ನೀಡಬೇಕಿದ್ದ ಎರಡು ಕೋಟಿ ರು. ಶುಲ್ಕವನ್ನು ವಿನಾಯಿತಿ ಮಾಡಿ ತೆಲಂಗಾಣ ಸರ್ಕಾರ 2017ರ ಜೂನ್  20ರಂದು ಹೊರಡಿಸಿದ ಆದೇಶವನ್ನು ರಹಸ್ಯವಾಗಿಟ್ಟಿರುವುದು ನಿಜವಲ್ಲವೇ? ಹಿಂದೆ ಯಾವ ಟ್ರಸ್ಟ್‌ಗೂ ನೀಡದ ವಿನಾಯಿತಿಯನ್ನು ಈ ಟ್ರಸ್ಟ್‌ಗೆ ನೀಡಲು, ನಾಯ್ಡು ಅವರ ಪುತ್ರಿ ಈ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿಯಾಗಿರುವುದೇ  ಕಾರಣವಾಗಿದೆ. ನಾಯ್ಡು ಅವರ ಪುತ್ರ ಮಾಲಿಕನಾಗಿರುವ ಹರ್ಷ ಟೊಯಾಟೊ ಹಾಗೂ ತೆಲಂಗಾಣ ಸಿಎಂನ ಮಗನ ಮಾಲಿಕತ್ವದ ಹಿಮಾಂಶು ಮೋಟರ್ಸ್‌ನಿಂದ 271 ಕೋಟಿ ರು. ವೆಚ್ಚದಲ್ಲಿ ಪೊಲೀಸ್ ಇಲಾಖೆಗೆ ವಾಹನಗಳನ್ನು  ಖರೀದಿ ಮಾಡಲು ತೆಲಂಗಾಣ ಸರ್ಕಾರ 2014ರಲ್ಲಿ ಆದೇಶಿಸಿರುವುದು ನಿಜವಲ್ಲವೇ?" ಎಂದು ಜೈರಾಮ್ ಪ್ರಶ್ನಿಸಿದ್ದಾರೆ.

ಆದರೆ ಕಾಂಗ್ರೆಸ್ ಪಕ್ಷದ ಈ ಎಲ್ಲ ಆರೋಪಗಳನ್ನು ಅಲ್ಲಗಳೆದಿರುವ ವೆಂಕಯ್ಯ ನಾಯ್ಡು ಅವರು, ದುರುದ್ದೇಶ ಪೂರಿತ ಆರೋಪಗಳು ಇವು ಎಂದು  ಹೇಳಿದ್ದಾರೆ.

ಮುಂಬರುವ ಆಗಸ್ಟ್ 5ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ನಾಯ್ಡು ಈಗಾಗಲೇ ಪಕ್ಷದ ಜವಾಬ್ದಾರಿ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಯುಪಿಎ  ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಯವರ ವಿರುದ್ಧ ಗೆಲ್ಲುವ ಫೇವರಿಟ್ ಎನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT