ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಶಬ್ಬೀರ್ ಶಾ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾ ಬಂಧನ

ಹುರಿಯತ್ ಪ್ರತ್ಯೇಕತಾವಾದಿ ಸೈಯದ್ ಅಳಿ ಶಾ ಗಿಲಾನಿ ಅಳಿಯ ಸೇರಿ 7 ಮಂದಿಯನ್ನು ಬಂಧಿಸಿದ ಬೆನ್ನಲ್ಲೇ, ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಶಬ್ಬೀರ್ ಶಾ ಮತ್ತು ಯಾಸಿನ್ ಮಲಿಕ್ ನನ್ನು ಕಾಶ್ಮೀರ ಪೊಲೀಸರು ಮಂಗಳವಾರ...

ಶ್ರೀನಗರ: ಹುರಿಯತ್ ಪ್ರತ್ಯೇಕತಾವಾದಿ ಸೈಯದ್ ಅಳಿ ಶಾ ಗಿಲಾನಿ ಅಳಿಯ ಸೇರಿ 7 ಮಂದಿಯನ್ನು ಬಂಧಿಸಿದ ಬೆನ್ನಲ್ಲೇ, ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಶಬ್ಬೀರ್ ಶಾ ಮತ್ತು ಯಾಸಿನ್ ಮಲಿಕ್ ನನ್ನು ಕಾಶ್ಮೀರ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. 
ಶಬ್ಬೀರ್ ಶಾ, ಜಮ್ಮು ಮತ್ತು ಕಾಶ್ಮೀರ ಡೆಮಾಕ್ರಾಟಿಕ್ ಫ್ರೀಡಂ ಪಾರ್ಟಿಯ ಸ್ಥಾಪಕನಾಗಿದ್ದಾನೆ. 10 ವರ್ಷ ಹಳೆಯ ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. 
ಶ್ರೀನಗರದಲ್ಲಿ ಶಬ್ಬೀರ್ ಶಾನನ್ನು ಬಂಧನಕ್ಕೊಳಪಡಿಸಲಾಗಿತ್ತು. ಬುಧವಾರ ದೆಹಲಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಈ ಹಿಂದೆ ತನಿಖೆಗೆ ಹಾಜರಾಗುವಂತೆ ಹಲವು ಬಾರಿ ಶಾಗೆ ಸಮನ್ಸ್ ಜಾರಿ ಮಾಡಿದೆ. ಆದರೆ, ಇದಾವುದಕ್ಕೂ ಶಾ ಪ್ರತಿಕ್ರಿಯೆಗಳನ್ನು ನೀಡದ ಹಿನ್ನಲೆಯಲ್ಲಿ ದೆಹಲಿ ನ್ಯಾಯಾಲಯ ಶಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇದರಂತೆ ಕಳೆದ ರಾತ್ರಿ ಶಬ್ಬೀರ್ ಶಾನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 
ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಶಾ, ನನ್ನ ವಿರುದ್ಧದ ಜಾರಿ ನಿರ್ದೇಶನಾಲಯದ ಪ್ರಕರಣ ರಾಜಕೀಯ ಪ್ರೇರಿತವಾದ್ದು ಎಂದು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ ಸ್ಥಾಪಕ ಯಾಸಿನ್ ಮಲಿಕ್ ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT