ಸುಪ್ರೀಂ ಕೋರ್ಟ್ 
ದೇಶ

ಖಾಸಗಿತನದ ಹಕ್ಕು ಮೂಲಭೂತ ಹಕ್ಕಾಗಿಸಿ: ಕರ್ನಾಟಕ ಸೇರಿ 4 ರಾಜ್ಯಗಳು ಸುಪ್ರೀಂಗೆ ಮನವಿ

ಖಾಸಗಿತನದ ಹಕ್ಕನ್ನು ಸಂವಿಧಾನದಡಿ ಮೂಲಭೂತ ಹಕ್ಕಾಗಿ ಘೋಷಿಸುವಂತೆ ಕರ್ನಾಟಕ ಹಾಗೂ ಪಶ್ಚಿಮ ಬಂಗಾಳ....

ನವದೆಹಲಿ: ಖಾಸಗಿತನದ ಹಕ್ಕನ್ನು ಸಂವಿಧಾನದಡಿ ಮೂಲಭೂತ ಹಕ್ಕಾಗಿ ಘೋಷಿಸುವಂತೆ ಕರ್ನಾಟಕ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಬಿಜೆಪಿಯೇತರ ನಾಲ್ಕು ರಾಜ್ಯಗಳು ಬುಧವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿವೆ.
ಖಾಸಗಿತನದ ಹಕ್ಕು ಮೂಲಭೂತ ಹಕ್ಕೆ ಎಂಬುದರ ಕುರಿತು ಮುಖ್ಯನ್ಯಾಯಮೂರ್ತಿ ಜೆ.ಎಸ್.ಖೆಹರ್‌ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠ ವಿಚಾರಣೆ ನಡೆಸುತ್ತಿದ್ದು, ಖಾಸಗಿತನ ಮೂಲಭೂತ ಹಕ್ಕಾಗಿ ಘೋಷಿಸುವಂತೆ ಕರ್ನಾಟಕ, ಪಶ್ಚಿಮ ಬಂಗಾಳ, ಪಂಜಾಬ್‌ ಹಾಗೂ ಪುದುಚೇರಿ ರಾಜ್ಯಗಳ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ಇಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. 
ತಂತ್ರಜ್ಞಾನ ಆಧುನೀಕರಣಗೊಂಡಿರುವ ಕಾಲಘಟ್ಟದಲ್ಲಿ ‘ಖಾಸಗಿ ಹಕ್ಕು’ ಕುರಿತಾಗಿ ಕೋರ್ಟ್‌ ಮತ್ತೊಮ್ಮೆ ಪರಾಮರ್ಶಿಸಬೇಕೆಂದು ನಾಲ್ಕು ರಾಜ್ಯಗಳು ಮನವಿ ಮಾಡಿವೆ. ಅಲ್ಲದೆ ಆಧಾರ್‌ ಗುರುತು ಚೀಟಿ ಮೂಲಕ ವ್ಯಕ್ತಿಯ ಬಯೋಮೆಟ್ರಿಕ್‌ ಮಾಹಿತಿ ಸೇರಿದಂತೆ ಖಾಸಗಿ ಮಾಹಿತಿಯನ್ನು ಸಂಗ್ರಹಿಸುವುದು ಹಾಗೂ ಹಂಚುವುದು ಖಾಸಗಿತನದ ’ಮೂಲಭೂತ’ ಹಕ್ಕು ಉಲ್ಲಂಘಿಸಿದಂತೆ ಆಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕಾಗಿಸಲು ಸಾಧ್ಯವಿಲ್ಲ ಎಂಬ ವಾದವನ್ನು ಕೇಂದ್ರ ಸರ್ಕಾರ ಮುಂದುವರಿಸಿದೆ. ಸಂವಿಧಾನದಲ್ಲಿ ಖಾಸಗಿತನ ಮೂಲಭೂತ ಹಕ್ಕಾಗಿದೆಯೇ ಎಂಬುದರ ಕುರಿತು ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠ, ‘ಖಾಸಗಿತನದ ಹಕ್ಕು ಪರಿಪೂರ್ಣ ಅಲ್ಲ, ಈ ಹಕ್ಕಿನ ಮೇಲೆ ಸರ್ಕಾರ ನ್ಯಾಯಯುತ ನಿರ್ಬಂಧ ಹೇರುವುದನ್ನು ತಡೆಯಲು ಸಾಧ್ಯವಿಲ್ಲ’ ಎಂದಿತ್ತು.
ಆಧಾರ್‌ ನೋಂದಣಿಗಾಗಿ ದೇಹಕ್ಕೆ ಸಂಬಂಧಿಸಿದ ಮಾಹಿತಿಗಳನ್ನೂ ನೀಡಬೇಕಾಗುತ್ತದೆ. ಇದು ವ್ಯಕ್ತಿಯ ಖಾಸಗಿತನದ ಉಲ್ಲಂಘನೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿಯ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT