ಸಾಂದರ್ಭಿಕ ಚಿತ್ರ 
ದೇಶ

ಆರ್ಥಿಕ ಸಮಸ್ಯೆ: ತೆಲಂಗಾಣದಲ್ಲಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣು

ತೀವ್ರ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ...

ಕಮ್ಮಂ: ತೀವ್ರ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ತೆಲಂಗಾಣದಲ್ಲಿ ನಡೆದಿದೆ.
ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಇಂದು ಬೆಳಗಿನ ಜಾವ ಕಮ್ಮಂ ಜಿಲ್ಲೆಯ ಕುಸುಮಂಚಿ ಮಂಡಲದ ನಾಯಕಂಗುಡೆಮ್ ನ ಪಲೇರು ಜಲಾಶಯಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಲಾಶಯದಿಂದ ಐವರ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಮತ್ತೊಂದು ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಆತ್ಮಹತ್ಯೆಗೆ ಶರಣಾದವರು ಕುಸುಮಂಚಿ ಮಂಡಲದ ಜೀಲ್ಲಚೆರುವು ಗ್ರಾಮದ ನಿವಾಸಿಗಳಾಗಿದ್ದಾರೆ.
ಮೃತರನ್ನು ಶೈಕ್ ಪೆಂಟೂ ಸಾಹೇಬ್(50), ಆತನ ಪತ್ನಿ ಶೈಕ್ ಮೆಹಬೂಬಾ ಬೀ(45), ಅವರ ಮಗ ಶೈಕ್ ಸಲೀಮ್(32) ಸೋಸೆ ರಜಿಯಾಶ್ರ(28) ಹಾಗೂ ಮೊಮ್ಮಕ್ಕಳಾದ ಸೋನಿ(8) ಮತ್ತು ನಸ್ರೀನ್(4) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಶರಣಾದ ಕುಟುಂಬ ಭೂ ವ್ಯವಹಾರದಲ್ಲಿ ಕೆಲವು ವ್ಯಕ್ತಿಗಳಿಂದ ಮೋಸ ಹೋಗಿತ್ತು. ಇದರಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ ಮತ್ತೊಬ್ಬ ಕುಟುಂಬ ಸದಸ್ಯ ಶೇಕ್ ಲಾಲೂ ಸಹ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ. ಆದರೆ ಭಯಗೊಂಡು ಕೊನೆ ಗಳಿಗೆಯಲ್ಲಿ ವಾಪಸ್ ಬಂದು ಗ್ರಾಮದವರಿಗೆ ಸುದ್ದಿ ತಿಳಿಸಿದ್ದಾನೆ ಎಂದು ಅವರು ಹೇಳಿದ್ದಾರೆ.
ಗ್ರಾಮಸ್ಥರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT