ಸಾಂದರ್ಭಿಕ ಚಿತ್ರ 
ದೇಶ

ಆರ್ಥಿಕ ಸಮಸ್ಯೆ: ತೆಲಂಗಾಣದಲ್ಲಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣು

ತೀವ್ರ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ...

ಕಮ್ಮಂ: ತೀವ್ರ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ತೆಲಂಗಾಣದಲ್ಲಿ ನಡೆದಿದೆ.
ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಇಂದು ಬೆಳಗಿನ ಜಾವ ಕಮ್ಮಂ ಜಿಲ್ಲೆಯ ಕುಸುಮಂಚಿ ಮಂಡಲದ ನಾಯಕಂಗುಡೆಮ್ ನ ಪಲೇರು ಜಲಾಶಯಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಲಾಶಯದಿಂದ ಐವರ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಮತ್ತೊಂದು ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಆತ್ಮಹತ್ಯೆಗೆ ಶರಣಾದವರು ಕುಸುಮಂಚಿ ಮಂಡಲದ ಜೀಲ್ಲಚೆರುವು ಗ್ರಾಮದ ನಿವಾಸಿಗಳಾಗಿದ್ದಾರೆ.
ಮೃತರನ್ನು ಶೈಕ್ ಪೆಂಟೂ ಸಾಹೇಬ್(50), ಆತನ ಪತ್ನಿ ಶೈಕ್ ಮೆಹಬೂಬಾ ಬೀ(45), ಅವರ ಮಗ ಶೈಕ್ ಸಲೀಮ್(32) ಸೋಸೆ ರಜಿಯಾಶ್ರ(28) ಹಾಗೂ ಮೊಮ್ಮಕ್ಕಳಾದ ಸೋನಿ(8) ಮತ್ತು ನಸ್ರೀನ್(4) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಶರಣಾದ ಕುಟುಂಬ ಭೂ ವ್ಯವಹಾರದಲ್ಲಿ ಕೆಲವು ವ್ಯಕ್ತಿಗಳಿಂದ ಮೋಸ ಹೋಗಿತ್ತು. ಇದರಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ ಮತ್ತೊಬ್ಬ ಕುಟುಂಬ ಸದಸ್ಯ ಶೇಕ್ ಲಾಲೂ ಸಹ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ. ಆದರೆ ಭಯಗೊಂಡು ಕೊನೆ ಗಳಿಗೆಯಲ್ಲಿ ವಾಪಸ್ ಬಂದು ಗ್ರಾಮದವರಿಗೆ ಸುದ್ದಿ ತಿಳಿಸಿದ್ದಾನೆ ಎಂದು ಅವರು ಹೇಳಿದ್ದಾರೆ.
ಗ್ರಾಮಸ್ಥರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT