ಹಿರಿಯ ವಕೀಲ ರಾಮ್ ಜೇಠ್ಮಲಾನಿ 
ದೇಶ

2 ಕೋಟಿ ರು. ಶುಲ್ಕ ಕೇಳಿದ ಜೇಠ್ಮಲಾನಿ, ಕೇಜ್ರಿವಾಲ್ ವಕೀಲ ಸ್ಥಾನಕ್ಕೆ ರಾಜಿನಾಮೆ

ನಾಗರಿಕ ಮತ್ತು ಕ್ರಿಮಿನಲ್ ಮಾನನಷ್ಟ ಪ್ರಕರಣಗಳಿಗೆ ಸಂಬಂಧಪಟ್ಟಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಕೀಲ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಸುಪ್ರೀಂಕೋರ್ಟ್ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಕೇಜ್ರಿವಾಲ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಿಂದ ಹಿಂದೆ ಸರಿದಿದ್ದಾರೆ.
ಅವರು ಅರವಿಂದ ಕೇಜ್ರಿವಾಲ್ ಪರ ವಕಾಲತ್ತು ವಹಿಸಿದ್ದರು. ನ್ಯಾಯಾಲಯದಲ್ಲಿ  ಜೇಟ್ಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲು ವಕೀಲರಿಗೆ ಹೇಳಿರುವುದಾಗಿ ಕೇಜ್ರಿವಾಲ್ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಪರ ವಕಾಲತ್ತು ನಡೆಸುವುದರಿಂದ ಹಿಂದೆ ಸರಿಯಲು ಜೇಠ್ಮಲಾನಿ ನಿರ್ಧರಿಸಿದ್ದಾರೆ.
ಈ ಬಗ್ಗೆ ಕೇಜ್ರಿವಾಲ್ ಗೆ ಬರೆದಿರುವ ಪತ್ರದಲ್ಲಿ, ತಮ್ಮ ವಕಾಲತ್ತು ಶುಲ್ಕವಾಗಿ 2 ಕೋಟಿ ರೂಪಾಯಿಗಳಷ್ಟು ನೀಡಬೇಕೆಂದು ಬೇಡಿಕೆಯಿಟ್ಟಿದ್ದಾರೆ.
ಪತ್ರದಲ್ಲಿ ಬರೆದಿರುವ ಬಗ್ಗೆ ಹೆಚ್ಚು ವಿವರ ನೀಡುವುದಿಲ್ಲ ಎಂದು ಜೇಠ್ಮಲಾನಿ ಪತ್ರಿಕೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಅಫಿಡವಿಟ್ಟಿನಲ್ಲಿ, ಒಬ್ಬ ಹಿರಿಯ ವಕೀಲರಿಗೆ ನ್ಯಾಯಾಲಯದಲ್ಲಿ ಅವಹೇಳನಕಾರಿ ಪದ ಬಳಸಲು ತಾನು ಸೂಚನೆ ನೀಡಿದ್ದೇನೆ ಎಂಬುದನ್ನು ಊಹಿಸಲೂ ಕೂಡ ಅಸಾಧ್ಯ ಎಂದು ಹೇಳಿದ್ದರು.
ಕಳೆದ ಮೇ 18ರಂದು ರಾಮ್ ಜೇಟ್ಮಲಾನಿ ನ್ಯಾಯಾಲಯದಲ್ಲಿ ಅರವಿಂದ ಕೇಜ್ರಿವಾಲ್ ಪರ ವಕಾಲತ್ತು ವಹಿಸಿ ಮಾತನಾಡುವಾಗ ಹಣಕಾಸು ಸಚಿವ ಅರುಣ್ ಜೇಟ್ಲಿಯವರನ್ನು ವಂಚಕ ಎಂದು ಕರೆದಿದ್ದರು. ಅದಕ್ಕೆ ಅರುಣ್ ಜೇಟ್ಲಿಯವರು ಅರವಿಂದ ಕೇಜ್ರಿವಾಲ್ ವಿರುದ್ಧ 10 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಕೇಸನ್ನು ಕೋರ್ಟ್ ನಲ್ಲಿ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT