ನವದೆಹಲಿ: ಬಿಹಾರ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ರಾಜೀನಾಮೆ ನೀಡುವುದಿಲ್ಲ ಎಂದು ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಕೇಳಿಲ್ಲ. ತೇಜಸ್ವಿ ಯಾದವ್ ರಾಜೀನಾಮೆಯನ್ನು ನೀಡುವುದೂ ಇಲ್ಲ ಎಂದಿರುವ ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ.
ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಚಾರ್ಜ್ ಶೀಟ್ ನಲ್ಲಿ ಲಾಲು ಪ್ರಸಾದ್ ಯಾದವ್ ಅವರ ಹೆಸರಿನೊಂದಿಗೆ ತೇಜಸ್ವಿ ಯಾದವ್ ಹೆಸರೂ ಇದ್ದು, ತೇಜಸ್ವಿ ಯಾದವ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಲಾಲು ಪ್ರಸಾದ್ ಯಾದವ್ ತೇಜಸ್ವಿ ಯಾದವ್ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ.