ಪ್ರತಿಭಟನಾ ನಿರತ ಆರ್ ಜೆಡಿ ಕಾರ್ಯಕರ್ತರು 
ದೇಶ

ಸರ್ಕಾರ ರಚಿಸುವಂತೆ ರಾಜ್ಯಪಾಲರಿಂದ ನಿತೀಶ್ ಗೆ ಅಧಿಕೃತ ಆಹ್ವಾನ!

ಪ್ರಮುಖ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರಿಗೆ ಗುರುವಾರ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ಪ್ರಮುಖ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರಿಗೆ ಗುರುವಾರ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು  ತಿಳಿದುಬಂದಿದೆ.

ಆರ್ ಜೆಡಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ನಿತೀಶ್ ಕುಮಾರ್ ಅವರು ಇದೀಗ ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡುತ್ತಿದ್ದು, ಬಿಜೆಪಿ ಬಿಹಾರ ಘಟಕದ ಮುಖ್ಯಸ್ಥ  ಸುಶೀಲ್ ಕುಮಾರ್ ಮೋದಿ ಅವರು ಉಪ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಾಟ್ನಾದಲ್ಲಿರುವ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇನ್ನು ಕೆಲವೇ  ಕ್ಷಣಗಳಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನೆರವೇರಲಿದೆ ಎಂದು ಹೇಳಲಾಗುತ್ತಿದೆ.

ಆರ್ ಜೆಡಿ ಕಾರ್ಯಕರ್ತರಿಂದ ವ್ಯಾಪಕ ಪ್ರತಿಭಟನೆ
ಏತನ್ಮಧ್ಯೆ ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಸರ್ಕಾರ ರಚನೆ ಮಾಡುತ್ತಿರುವ ನಿತೀಶ್ ಕುಮಾರ್ ಅವರ ನಿಲುವಿಗೆ ಆರ್ ಜೆಡಿ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಪಾಟ್ನಾದ ಗಾಂಧಿ ಸೇತು  ರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ನಿತೀಶ್ ಕುಮಾರ್ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತೆಯೇ ಹೆದ್ದಾರಿಗಳಲ್ಲೂ ಆರ್ ಜೆಡಿ ಕಾರ್ಯಕರ್ತರು ಪ್ರತಿಭಟನೆ  ನಡೆಸುತ್ತಿದ್ದು, ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT