ಕೇಂದ್ರ ಸರ್ಕಾರ 
ದೇಶ

ಪ್ರಮಾಣ ಪತ್ರ ಸಲ್ಲಿಸುವ ಪ್ರಕ್ರಿಯೆ ಕೈಬಿಡುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸಲಹೆ

ಕಾರ್ಯನಿರ್ವಾಹಕ ಮಟ್ಟದ ಹುದ್ದೆಗಳ ಕೆಲಸಗಳಿಗೆ ಸೇರುವವರಿಂದ ಪ್ರಮಾಣ ಪತ್ರ ಸ್ವೀಕರಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸಲಹೆ ನೀಡಿದೆ.

ನವದೆಹಲಿ: ಕಾರ್ಯನಿರ್ವಾಹಕ ಮಟ್ಟದ ಹುದ್ದೆಗಳ ಕೆಲಸಗಳಿಗೆ ಸೇರುವವರಿಂದ ಪ್ರಮಾಣ ಪತ್ರ ಸ್ವೀಕರಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸಲಹೆ ನೀಡಿದೆ. 
ಈ ಕುರಿತು ಸಂಸತ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಪ್ರಮಾಣ ಪತ್ರ ಸಲ್ಲಿಸುವುದರ ಬದಲಿಗೆ ರಾಜ್ಯ ಸರ್ಕಾರಗಳು ನೇಮಕವಾಗಬೇಕಿರುವ ಅಭ್ಯರ್ಥಿಗಳಿಂದ ಸ್ವಯಂ ದೃಢೀಕರಣ ಪತ್ರ ಸ್ವೀಕರಿಸಲಿ ಎಂದು ಸಲಹೆ ನೀಡಿರುವುದಾಗಿ ಹೇಳಿದೆ. 
ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಇಂತಹದ್ದೊಂದು ಸಲಹೆಯನ್ನು ಕಳಿಸಿದೆ ಎಂದು ಸಿಬ್ಬಂದಿ ನೇಮಕಾತಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ದಾಖಲೆಗಳಿಗೆ ಸಂಬಂಧಿಸಿದಂತೆ ಗಝೆಟೆಡ್ ಅಫಿಡವಿಟ್ ಪಡೆಯುವ ಬದಲು ಸ್ವಯಂ ದೃಢೀಕರಣ ನೀಡುವ ಪ್ರಕ್ರಿಯೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವುದಾಗಿ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ