ಕೇಂದ್ರ ಸರ್ಕಾರ 
ದೇಶ

ಪ್ರಮಾಣ ಪತ್ರ ಸಲ್ಲಿಸುವ ಪ್ರಕ್ರಿಯೆ ಕೈಬಿಡುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸಲಹೆ

ಕಾರ್ಯನಿರ್ವಾಹಕ ಮಟ್ಟದ ಹುದ್ದೆಗಳ ಕೆಲಸಗಳಿಗೆ ಸೇರುವವರಿಂದ ಪ್ರಮಾಣ ಪತ್ರ ಸ್ವೀಕರಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸಲಹೆ ನೀಡಿದೆ.

ನವದೆಹಲಿ: ಕಾರ್ಯನಿರ್ವಾಹಕ ಮಟ್ಟದ ಹುದ್ದೆಗಳ ಕೆಲಸಗಳಿಗೆ ಸೇರುವವರಿಂದ ಪ್ರಮಾಣ ಪತ್ರ ಸ್ವೀಕರಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸಲಹೆ ನೀಡಿದೆ. 
ಈ ಕುರಿತು ಸಂಸತ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಪ್ರಮಾಣ ಪತ್ರ ಸಲ್ಲಿಸುವುದರ ಬದಲಿಗೆ ರಾಜ್ಯ ಸರ್ಕಾರಗಳು ನೇಮಕವಾಗಬೇಕಿರುವ ಅಭ್ಯರ್ಥಿಗಳಿಂದ ಸ್ವಯಂ ದೃಢೀಕರಣ ಪತ್ರ ಸ್ವೀಕರಿಸಲಿ ಎಂದು ಸಲಹೆ ನೀಡಿರುವುದಾಗಿ ಹೇಳಿದೆ. 
ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಇಂತಹದ್ದೊಂದು ಸಲಹೆಯನ್ನು ಕಳಿಸಿದೆ ಎಂದು ಸಿಬ್ಬಂದಿ ನೇಮಕಾತಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ದಾಖಲೆಗಳಿಗೆ ಸಂಬಂಧಿಸಿದಂತೆ ಗಝೆಟೆಡ್ ಅಫಿಡವಿಟ್ ಪಡೆಯುವ ಬದಲು ಸ್ವಯಂ ದೃಢೀಕರಣ ನೀಡುವ ಪ್ರಕ್ರಿಯೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವುದಾಗಿ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT