ಜೆಡಿಯು ಸಂಸದ ಅಲಿ ಅನ್ವರ್ 
ದೇಶ

ನಿತೀಶ್‌ ನಿರ್ಧಾರಕ್ಕೆ ತಮ್ಮ ಬೆಂಬಲವಿಲ್ಲ, ಸೂಕ್ತ ಸಂದರ್ಭದಲ್ಲಿ ಪ್ರಶ್ನಿಸುತ್ತೇನೆ: ಜೆಡಿಯು ಸಂಸದ ಅಲಿ ಅನ್ವರ್

ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಬಿಹಾರದಲ್ಲಿ ಇದೀಗ ಬಿಜೆಪಿ-ಜೆಡಿಯು ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಜೆಡಿಯು ಸಂಸದರೊಬ್ಬರು ನಿತೀಶ್ ಕುಮಾರ್ ನಿರ್ಧಾರವನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ.

ಪಾಟ್ನಾ: ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಬಿಹಾರದಲ್ಲಿ ಇದೀಗ ಬಿಜೆಪಿ-ಜೆಡಿಯು ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಜೆಡಿಯು ಸಂಸದರೊಬ್ಬರು ನಿತೀಶ್ ಕುಮಾರ್ ನಿರ್ಧಾರವನ್ನು ಬಹಿರಂಗವಾಗಿಯೇ  ವಿರೋಧಿಸಿದ್ದಾರೆ.

ಎನ್‌ಡಿಎ ಸೇರುವ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರ ನಿರ್ಧಾರಕ್ಕೆ ಜೆಡಿ(ಯು) ಪಕ್ಷದೊಳಗಡೆಯೇ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಜೆಡಿಯು ಪಕ್ಷದ ರಾಜ್ಯಸಭೆ ಸದಸ್ಯ ಅಲಿ ಅನ್ವರ್ ಅವರು ನಿತೀಶ್ ಕುಮಾರ್  ನಿರ್ಧಾರವನ್ನು ವಿರೋಧಿಸಿದ್ದಾರೆ. ನಿತೀಶ್ ಅವರ ನಿರ್ಧಾರವನ್ನು ಬೆಂಬಲಿಸುವುದಿಲ್ಲ ಎಂದು  ಅವರು, ಅವಕಾಶ ದೊರೆತರೆ ಈ ಕುರಿತು ಪಕ್ಷದ ನಾಯಕರ ಜತೆ ಚರ್ಚಿಸಲು ಸಿದ್ಧವಿರುವುದಾಗಿ ಅವರು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಕುರಿತು ಕಿಡಿಕಾರಿರುವ ಅನ್ವರ್ ಅಲಿ ಅವರು, ಈ ಹಿಂದೆ ನಾವು ಯಾವ ಕಾರಣಗಳಿಂದಾಗ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದೆವೋ ಇಂದಿಗೂ ಬಿಜೆಪಿಯಲ್ಲಿ ಅದೇ ಪರಿಸ್ಥಿತಿ ಮುಂದುವರೆದಿದೆ. ಹೀಗಾಗಿ  ನಿತೀಶ್ ಕುಮಾರ್ ಅವರ ನಿರ್ಧಾರ ಸರಿಯಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ಸಭೆಯಲ್ಲಿ ತಮಗೆ ಅವಕಾಶ ದೊರೆತರೆ ಖಂಡಿತಾ ಈ ಬಗ್ಗೆ ಪ್ರಶ್ನಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯೆಗೆ ಶರದ್ ಯಾದವ್ ನಕಾರಾ
ಏತನ್ಮಧ್ಯೆ ನಿತೀಶ್ ಕುಮಾರ್ ಅವರ ಈ ದಿಢೀರ್ ನಿರ್ಧಾರಕ್ಕೆ ಸಂಬಂಧಿಸಿದಂತೆ ಜೆಡಿಯು ಮುಖ್ಯಸ್ಥ ಶರದ್ ಯಾದವ್ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT