ನಿತೀಶ್ ಕುಮಾರ್ ನಿವಾಸದಲ್ಲಿ ನಡೆದ ಸಭೆ 
ದೇಶ

ಬೆಳಗ್ಗೆ 10ಕ್ಕೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ!

ಬಿಹಾರದಲ್ಲಿನ ರಾಜಕೀಯ ಹೈಡ್ರಾಮಾ ಮುಂದುವರೆದಿದ್ದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಗುರುವಾರ ಸಂಜೆ ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಮಯವನ್ನು ದಿಢೀರ್ ಬದಲಾವಣೆ ಮಾಡಲಾಗಿದ್ದು,. ಬೆಳಗ್ಗೆ 10 ಗಂಟೆಗೇ ಪ್ರಮಾಣ ವಚನ ನೆರವೇರಲಿದೆ ಎಂದು ಹೇಳಲಾಗುತ್ತಿದೆ.

ಪಾಟ್ನಾ: ಬಿಹಾರದಲ್ಲಿನ ರಾಜಕೀಯ ಹೈಡ್ರಾಮಾ ಮುಂದುವರೆದಿದ್ದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಗುರುವಾರ ಸಂಜೆ ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಮಯವನ್ನು ದಿಢೀರ್ ಬದಲಾವಣೆ  ಮಾಡಲಾಗಿದ್ದು,. ಬೆಳಗ್ಗೆ 10 ಗಂಟೆಗೇ ಪ್ರಮಾಣ ವಚನ ನೆರವೇರಲಿದೆ ಎಂದು ಹೇಳಲಾಗುತ್ತಿದೆ.

ಕಳೆದ ಒಂದು ತಿಂಗಳಿನಿಂದ ಜೆಡಿಯು, ಆರ್ ಜೆಡಿ ನಡುವೆ ನಡೆಯುತ್ತಿದ್ದ ಶೀತಲ ಸಮರಕ್ಕೆ ಕೊನೆಗೂ ಸಿಎಂ ನಿತೀಶ್ ಕುಮಾರ್ ಮಂಗಳ ಹಾಡಿದ್ದು, ಜೆಡಿಯು, ಆರ್ ಜೆಡಿ ಮೈತ್ರಿಕೂಟದಿಂದ ಹೊರಬಂದು ತಮ್ಮ ಸಿಎಂ ಸ್ಥಾನಕ್ಕೆ  ರಾಜಿನಾಮೆ ನೀಡಿದ್ದಾರೆ. ಅಂತೆಯೇ ತಮ್ಮ ಹಳೆಯ ಮಿತ್ರ  ಬಿಜೆಪಿಯೊಂದಿಗೆ ಸೇರಿ ಮತ್ತೆ ಬಿಹಾರದ ಸಿಎಂ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ನಿನ್ನೆ ಇಂದು ಸಂಜೆ ಪ್ರಮಾಣ ವಚನ  ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿತ್ತಾದರೂ, ದಿಢೀರ್ ಬೆಳವಣಿಗೆಯಲ್ಲಿ ಕಾರ್ಯಕ್ರಮವನ್ನು ಇಂದು ಬೆಳಗ್ಗೆ 10 ಗಂಟೆಗೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೂಲಗಳ ಪ್ರಕಾರ ಈಗಾಗಲೇ ಬಿಜೆಪಿ ಪಕ್ಷ ನಿತೀಶ್ ಕುಮಾರ್ ಅವರಿಗೆ ಬೆಂಬಲ ಸೂಚಿಸಿ ಫ್ಯಾಕ್ಸ್ ಮೂಲಕ ಬಿಹಾರ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರಿಗೆ ರವಾನಿಸಿದ್ದು, ಬಿಜೆಪಿಯ 53 ಶಾಸಕರ ಬೆಂಬಲ ನಿತೀಶ್  ಕುಮಾರ್ ಅವರಿಗಿದೆ ಎಂದು ಹೇಳಲಾಗಿದೆ. ಜೆಡಿಯು ಬಳಿ 71 ಶಾಸಕರ ಬೆಂಬಲವಿದ್ದು, ಸರ್ಕಾರ ರಚನೆಗೆ 122 ಸ್ಥಾನಗಳ ಅಗತ್ಯತೆ ಇದೆ. ಬಿಜೆಪಿ ಮತ್ತು ಜೆಡಿಯು ಮೈತ್ರಿಯಾದರೆ ಅವುಗಳ ಒಟ್ಟು ಗಾತ್ರ 124 ರನ್ ಗಳಿಗೇರುತ್ತದೆ.

ಈ ಹಿಂದೆ ನಿತೀಶ್ ಕುಮಾರ್ ಅವರಿಗೆ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿಕೊಂಡಿದ್ದ ಬಿಜೆಪಿ ಕಳೆದ ರಾತ್ರಿ ನಡೆದ ಮ್ಯಾರಥಾನ್ ಸಭೆ ಬಳಿಕ ತಾನೂ ಕೂಡ ಸರ್ಕಾರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿಕೆ ನೀಡಿದೆ. ಅದರಂತೆ ಇಂದಿನ  ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಹಾರ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರು ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT