ಸಂಗ್ರಹ ಚಿತ್ರ 
ದೇಶ

ಮಾಜಿ ಸಿಎಂ ಧರಂ ಸಿಂಗ್ ನಿಧನ: ಪ್ರಧಾನಿ ಮೋದಿ ಸಂತಾಪ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಧರಂ ಸಿಂಗ್ ಅವರ ಸಾವಿನ ದುಃಖವನ್ನು ತಡೆಯುವ ಶಕ್ತಿ ಅವರ ಕುಟುಂಬಕ್ಕೆ ದೇವರ ಕರುಣಿಸಲಿ ಎಂದು ಮೋದಿ ಹೇಳಿದ್ದಾರೆ.

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಧರಂ ಸಿಂಗ್ ಅವರ ಸಾವಿನ ದುಃಖವನ್ನು ತಡೆಯುವ ಶಕ್ತಿ ಅವರ ಕುಟುಂಬಕ್ಕೆ ದೇವರ  ಕರುಣಿಸಲಿ ಎಂದು ಮೋದಿ ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಧರಂ ಸಿಂಗ್ ಅವರ ನಿಧನದ ವಾರ್ತೆ ಕೇಳಿ ನಿಜಕ್ಕೂ ಆಘಾತವಾಯಿತು. ಅವರ ಸಾವು ನೋವು ತಂದಿದ್ದು, ಅವರ ಕುಟುಂಬಕ್ಕೆ ನೋವು  ತಡೆಯುವ ಶಕ್ತಿಯನ್ನು ದೇವರು ಕರುಣಿಸಲಿ. ಅವರ ಕುಟುಂಬದೊಂದಿಗೆ ನಾವಿದ್ದು, ದುಃಖದಲ್ಲಿ ಭಾಗಿಯಾಗುತ್ತೇವೆ. ಧರಂ ಸಿಂಗ್ ಅವರು ರಾಜಕೀಯದಲ್ಲಿ ಸಾಕಷ್ಟು ಅನುಭವ ಹೊಂದಿದವರಾಗಿದ್ದರು. ರಾಷ್ಟ್ರ ರಾಜಕಾರಣದಲ್ಲೂ  ಸಾಕಷ್ಟು ಅನುಭವ ಹೊಂದಿದ್ದರು. ಸಮಾಜಕ್ಕೆ ಅವರು ನೀಡಿದ್ದ ಕೊಡುಗೆಗಳು ಶಾಶ್ವತವಾಗಿ ನೆನಪಿನಲ್ಲಿರುವತ್ತವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

80 ವರ್ಷ ವಯಸ್ಸಿನ ಧರಂ ಸಿಂಗ್ ಅವರು ಇಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಇದೀಗ ಅವರ ಪಾರ್ಥೀವ ಶರೀರವನ್ನು ಸದಾಶಿವ ನಗರದ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು, ಅಲ್ಲಿಂದ  ಧರಂ ಸಿಂಗ್ ಅವರ ತವರು ಜಿಲ್ಲೆ ಜೇವರ್ಗಿಗೆ ರವಾನಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT