ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು 
ದೇಶ

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಕಿರಣ್ ರಿಜಿಜು

ಮಳೆಯ ಆರ್ಭಟ ಹಾಗೂ ಪ್ರವಾಹದಿಂದಾದಿ ತತ್ತರಿಸಿ ಹೋಗಿದ್ದ ಅಸ್ಸಾಂನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ಮಳೆಯ ಆರ್ಭಟ ಹಾಗೂ ಪ್ರವಾಹದಿಂದಾದಿ ತತ್ತರಿಸಿ ಹೋಗಿದ್ದ ಅಸ್ಸಾಂನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಗುರುವಾರ ಹೇಳಿದ್ದಾರೆ. 
ಅಸ್ಸಾಂ ಪ್ರವಾಹ ಪರಿಸ್ಥಿತಿ ಕುರಿತಂತೆ ಸಂಸತ್ತಿನಲ್ಲಿ ಮಾತನಾಡಿರುವ ಅವರು, ಆಂತರಿ ಕೇಂದ್ರ ಸಚಿವಾಲಯದ ತಂಡಗಳು ಜು.21 ರಿಂದಲೂ ರಾಜ್ಯದ ಪರಿಸ್ಥಿಗಳ ಮೇಲೆ ಕಣ್ಗಾವಲಿರಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿಯೇ ಸೂಕ್ತ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಮೂಲಕ ಕೇಂದ್ರ ಸರ್ಕಾರ ಹಣಕಾಸು ನೆರವನ್ನು ವಿಸ್ತರಣೆ ಮಾಡುತ್ತಿದೆ. ಈಗಾಗಲೇ 2017-2018ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ರೂ.9382.80 ಕೋಟಿ ಮೀಸಲಿರಿಸಿದೆ. ಈ ವರೆಗೂ ರೂ.3387.15 ಕೋಟಿ ಬಿಡುಗಡೆ ಮಾಡಿದೆ. ಇನ್ನುಳಿದ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. ಪ್ರವಾಹದಿಂದಾಗಿ ಬೆಳೆಗಳು ನಾಶಗೊಂಡು ಸಂಕಷ್ಟದಲ್ಲಿರುವ ರೈತರಿಗೆ ಶೀಘ್ರದಲ್ಲಿಯೇ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮೂಲಕ ಪರಿಹಾರ ಧನವನ್ನು ನೀಡಲಾಗುತ್ತೆದ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT