ಸುಪ್ರೀಂ ಕೋರ್ಟ್ 
ದೇಶ

ಜೀವಕ್ಕೆ ಅಪಾಯ: 10 ವರ್ಷದ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಸುಪ್ರೀಂ ನಕಾರ

ವೈದ್ಯಕೀಯ ವರದಿ ಪಡೆದ ನಂತರ 10 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನವದೆಹಲಿ: ವೈದ್ಯಕೀಯ ವರದಿ ಪಡೆದ ನಂತರ 10 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಬಾಲಕಿ ಈಗಾಗಲೇ 36 ವಾರಗಳ ಗರ್ಭಿಣಿಯಾಗಿದ್ದು, ಈ ಸಂದರ್ಭದಲ್ಲಿ ಗರ್ಭಪಾತ ಮಾಡಿದೆ ಬಾಲಕಿಯ ಜೀವಕ್ಕೆ ಅಪಾಯವಿದೆ ಎಂದು ವೈದ್ಯರ ಮಂಡಳಿ ನೀಡಿದ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೆಹರ್ ಹಾಗೂ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಗಂಭೀರವಾಗಿ ಪರಿಗಣಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕೋರ್ಟ್, ಗರ್ಭಪಾತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ರಾಜ್ಯಗಳು ಶಾಶ್ವತ ವೈದ್ಯಕೀಯ ಮಂಡಳಿಯೊಂದನ್ನು ಸ್ಥಾಪಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಿ. ಇಂತಹ ಪ್ರಕರಣಗಳು ಸುಪ್ರೀಂ ಕೋರ್ಟ್ ತಲುಪಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರಿಗೆ ಸೂಚಿಸಿದೆ.
ಬಾಲಕಿಯು 26 ವಾರಗಳ ಗರ್ಭಿಣಿ ಎಂಬುದು ದೃಢಪಟ್ಟಿದ್ದರಿಂದ, ಚಂಡೀಗಡದ ಸ್ಥಳೀಯ ನ್ಯಾಯಾಲಯ ಗರ್ಭಪಾತ ಮಾಡಿಸಿಕೊಳ್ಳಲು ಜುಲೈ18ರಂದು ಅವಕಾಶ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಲಾಗಿತ್ತು.
ಹಲವು ಬಾರಿ ಸೋದರ ಮಾವನಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಈಗ 36 ವಾರಗಳ ಗರ್ಭಿಣಿಯಾಗಿದ್ದಾಳೆ. 10 ವರ್ಷಕ್ಕೆ ಬಾಲಕಿ ಗರ್ಭಧರಿಸುವುದು ವೈದ್ಯರಲ್ಲೂ ಅಚ್ಚರಿ ಮೂಡಿಸಿದ್ದು, ಇಂಥ ಪ್ರಕರಣಗಳಲ್ಲಿ ಸಹಜ ಹೆರಿಗೆ ದೂರದ ಮಾತು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದೂ ಅತ್ಯಂತ ಅಪಾಯ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT