ಸುಪ್ರೀಂ ಕೋರ್ಟ್ 
ದೇಶ

ಜೀವಕ್ಕೆ ಅಪಾಯ: 10 ವರ್ಷದ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಸುಪ್ರೀಂ ನಕಾರ

ವೈದ್ಯಕೀಯ ವರದಿ ಪಡೆದ ನಂತರ 10 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನವದೆಹಲಿ: ವೈದ್ಯಕೀಯ ವರದಿ ಪಡೆದ ನಂತರ 10 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಬಾಲಕಿ ಈಗಾಗಲೇ 36 ವಾರಗಳ ಗರ್ಭಿಣಿಯಾಗಿದ್ದು, ಈ ಸಂದರ್ಭದಲ್ಲಿ ಗರ್ಭಪಾತ ಮಾಡಿದೆ ಬಾಲಕಿಯ ಜೀವಕ್ಕೆ ಅಪಾಯವಿದೆ ಎಂದು ವೈದ್ಯರ ಮಂಡಳಿ ನೀಡಿದ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೆಹರ್ ಹಾಗೂ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಗಂಭೀರವಾಗಿ ಪರಿಗಣಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕೋರ್ಟ್, ಗರ್ಭಪಾತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ರಾಜ್ಯಗಳು ಶಾಶ್ವತ ವೈದ್ಯಕೀಯ ಮಂಡಳಿಯೊಂದನ್ನು ಸ್ಥಾಪಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಿ. ಇಂತಹ ಪ್ರಕರಣಗಳು ಸುಪ್ರೀಂ ಕೋರ್ಟ್ ತಲುಪಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರಿಗೆ ಸೂಚಿಸಿದೆ.
ಬಾಲಕಿಯು 26 ವಾರಗಳ ಗರ್ಭಿಣಿ ಎಂಬುದು ದೃಢಪಟ್ಟಿದ್ದರಿಂದ, ಚಂಡೀಗಡದ ಸ್ಥಳೀಯ ನ್ಯಾಯಾಲಯ ಗರ್ಭಪಾತ ಮಾಡಿಸಿಕೊಳ್ಳಲು ಜುಲೈ18ರಂದು ಅವಕಾಶ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಲಾಗಿತ್ತು.
ಹಲವು ಬಾರಿ ಸೋದರ ಮಾವನಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಈಗ 36 ವಾರಗಳ ಗರ್ಭಿಣಿಯಾಗಿದ್ದಾಳೆ. 10 ವರ್ಷಕ್ಕೆ ಬಾಲಕಿ ಗರ್ಭಧರಿಸುವುದು ವೈದ್ಯರಲ್ಲೂ ಅಚ್ಚರಿ ಮೂಡಿಸಿದ್ದು, ಇಂಥ ಪ್ರಕರಣಗಳಲ್ಲಿ ಸಹಜ ಹೆರಿಗೆ ದೂರದ ಮಾತು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದೂ ಅತ್ಯಂತ ಅಪಾಯ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!